ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯು ತೀವ್ರಗೊಂಡಿದ್ದು, ಎರಡೂ ದೇಶಗಳ ಗಡಿಯಲ್ಲಿ ಸಂಘರ್ಷದ ವಾತಾವರಣ ಮುಂದುವರೆದಿದೆ. ಭಾರತದ ದಾಳಿಯಿಂದ ದಿವಾಳಿಯತ್ತ ಸಾಗುತ್ತಿರುವ ಪಾಕಿಸ್ತಾನದಲ್ಲೀಗ ಇಂಧನ ಕೊರತೆ ಎದುರಾಗಿದೆ.
ರಾಜಧಾನಿ ಇಸ್ಲಾಮಾಬಾದ್ ಆಡಳಿತ ಮುಂದಿನ 48 ಗಂಟೆಗಳ ಕಾಲ ಎಲ್ಲಾ ಪೆಟ್ರೋಲ್ ಪಂಪ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ. ಇಸ್ಲಾಮಾಬಾದ್ ಆಡಳಿತ ಹೊರಡಿಸಿದ ಅಧಿಕೃತ ಸೂಚನೆಯಲ್ಲಿ ನಿಖರ ಕಾರಣ ಉಲ್ಲೇಖಿಸದೇ, ಎಲ್ಲಾ ಪೆಟ್ರೋಲ್ ಪಂಪ್ಗಳನ್ನು ಕೂಡಲೇ ಮುಚ್ಚಬೇಕೆಂದು ಕಟ್ಟಾಜ್ಞೆ ಮಾಡಿದೆ. ಈ ಆದೇಶವನ್ನು ಇಂದು ಮುಂಜಾನೆ ಹೊರಡಿಸಲಾಗಿದೆ.
48 ಗಂಟೆವರೆಗೆ ಇಸ್ಲಾಮಾಬಾದ್ನಲ್ಲಿ ಖಾಸಗಿ ವಾಹನಗಳು, ಸಾರ್ವಜನಿಕ ಸಾರಿಗೆ ಹಾಗೂ ವಾಣಿಜ್ಯ ವಾಹನಗಳಿಗೆ ಇಂಧನ ಲಭ್ಯವಾಗದೇ ಎಲ್ಲಾ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದೆ. ಜೊತೆಗೆ ಈ ಬೆಳವಣಿಗೆ ಪಾಕ್ ಸರ್ಕಾರಕ್ಕೆ ಭಾರೀ ನಷ್ಟ ತಂದೊಡ್ಡುತ್ತಿದೆ ಎಂದು ತಿಳಿದುಬಂದಿದೆ.
ಇನ್ನು ಭಾರತದ ʻಆಪರೇಷನ್ ಸಿಂಧೂರʼ ಎಫೆಕ್ಟ್ ಪಾಕಿಸ್ತಾನದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಭಾರತ ನಡೆಸಿದ ವಾಯುದಾಳಿಗೆ ಪತರುಗುಟ್ಟಿಹೋಗಿರುವ ಪಾಕ್ ತಾನು ನಂಬಿದ್ದ ಶಕ್ತಿಶಾಲಿ ಅಸ್ತ್ರಗಳಿಂದಲೇ ಶತಕೋಟಿ ನಷ್ಟ ಅನುಭವಿಸಿದೆ. ಇದರಿಂದ ಪಾಕಿಸ್ತಾನದ ಆರ್ಥಿಕ ಸ್ಥಿತಿ ಈಗಾಗಲೇ ಅಧೋಗತಿ ತಲುಪಿದ್ದು, ದಿವಾಳಿಯ ಆಗುವ ಹಂತಕ್ಕೆ ತಲುಪಿದೆ.
ಇದನ್ನೂ ಓದಿ : ಜಮ್ಮು ಕಾಶ್ಮೀರದಲ್ಲಿ ಪಾಕ್ನ 3 ಫೈಟರ್ ಜೆಟ್ ಹೊಡೆದುರುಳಿಸಿದ ಭಾರತ!
