ಭಾರತ-ಪಾಕ್ ಉದ್ವಿಗ್ನತೆ :​ ಕರ್ನಾಟಕದಲ್ಲೂ ಹೈ ಅಲರ್ಟ್​.. ಪೊಲೀಸರಿಗೆ ‘ಹೆಚ್ಚುವರಿ ರಜೆ’ ಕ್ಯಾನ್ಸಲ್​​ – ಪರಮೇಶ್ವರ್ ಆದೇಶ!

ಬೆಂಗಳೂರು : ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಭಾರತದ ‘ಆಪರೇಷನ್​ ಸಿಂಧೂರ’​​ ದಾಳಿಯಿಂದ ತತ್ತರಿಸಿ ಹೋಗಿರುವ ಪಾಕ್​, ಗಡಿಯಲ್ಲಿ ಪ್ರಚೋದನಾಕಾರಿ ಗುಂಡಿನ ದಾಳಿ ನಡೆಸುತ್ತಿದೆ. ಪಾಕ್​ನಿಂದ ಮಿಸೈಲ್​ ದಾಳಿ ಹಿನ್ನೆಲೆಯಲ್ಲಿ ಕೇಂದ್ರದಿಂದ ಹೈ-ಅಲರ್ಟ್​ ಘೋಷಣೆ ಮಾಡಲಾಗಿದೆ. ಜೊತೆಗೆ ಪ್ರತಿಯೊಂದು ರಾಜ್ಯಕ್ಕೂ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.

ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್​​ ಮಾತನಾಡಿ, ಸೂಕ್ಷ್ಮ ಪರಿಸ್ಥಿತಿ ಇರೋದ್ರಿಂದ ಪೊಲೀಸರಿಗೆ ರಜೆ ಘೋಷಣೆ ಮಾಡಲ್ಲ. ಹೆಚ್ಚುವರಿ ರಜೆಗಳನ್ನ ಯಾರಿಗೂ ಕೊಡ್ತಿಲ್ಲ. ಗಡಿಯಲ್ಲಿ ಈಗಾಗಲೇ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಸೂಕ್ಷ್ಮ ಸನ್ನಿವೇಶ ಯಾವಾಗ ನಾರ್ಮಲ್​ ಆಗುತ್ತೋ ಗೊತ್ತಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಕೆಯ ಸಂದೇಶ ರವಾನಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಹೀಗಾಗಿ ಗಡಿ ಪ್ರದೇಶ ಹಾಗೂ ಕರಾವಳಿ ಪ್ರದೇಶಗಳಲ್ಲಿ ಸೆಕ್ಯೂರಿಟಿ ಹೆಚ್ಚಿಸಲಾಗಿದೆ. ಯುದ್ಧದ ಸನ್ನಿವೇಶದಲ್ಲಿ ಟೈಟ್ ಇರುತ್ತದೆ. ಮಂಗಳೂರು, ಉತ್ತರ ಕನ್ನಡದಲ್ಲಿ ಹೆಚ್ಚು ಸೆಕ್ಯೂರಿಟಿ ಇರುತ್ತದೆ. ನೌಕಾ ಸೇನೆಯ ಜೊತೆಗೆ ಪೊಲೀಸರು ಕೂಡ ಭದ್ರತೆಯನ್ನ ನೋಡಿಕೊಳ್ತಾರೆ. ಹೀಗಾಗಿ ಪೊಲೀಸರಿಗೆ ರಜೆ ಘೋಷಣೆ ಮಾಡಲ್ಲ. ಹಾಗೂ ಹೆಚ್ಚುವರಿ ರಜೆಗಳನ್ನ ಯಾರಿಗೂ ಕೊಡ್ತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್​ ತಿಳಿಸಿದ್ದಾರೆ.

ಸಿಎಂ ಸಭೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು 4 ಗಂಟೆಗೆ ಸಭೆ ಕರೆದಿದ್ದಾರೆ. ಪ್ರತಿಯೊಂದು ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಅಗತ್ಯ ವಸ್ತುಗಳ ಕೊರತೆ ಬಿದ್ದರೆ ನೀರು, ಆಹಾರ, ಆಸ್ಪತ್ರೆ ಮುಂಜಾಗರೂಕತೆ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗುತ್ತೆ. ಸಭೆಯಲ್ಲಿ ಗೃಹ ಇಲಾಖೆ ಮತ್ತು ಕಂದಾಯ ಇಲಾಖೆಯವರು ನಾವೆಲ್ಲ ಭಾಗವಿಹಿಸುತ್ತೇವೆ. ಕೇಂದ್ರ ಸರ್ಕಾರದ ಯಾವ್ದೇ ಸೂಚನೆ ಬಂದರೆ ಅದನ್ನು ನಾವು ಚರ್ಚೆ ಮಾಡುತ್ತವೆ. ತುರ್ತು ಸಂದರ್ಭದಲ್ಲಿ ನಾವು ರೆಡಿ ಇರುಬೇಕು ಆದರಿಂದ ಸಭೆ ಕರೆಯಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಹುನಿರೀಕ್ಷಿತ ‘S\O ಮುತ್ತಣ್ಣ’ ಚಿತ್ರದ ಹಾಡಿಗೆ ಧ್ವನಿಯಾದ ಸಂಜಿತ್ ಹೆಗ್ಡೆ!

Btv Kannada
Author: Btv Kannada

Read More