ಶೃಂಗೇರಿ : ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ನಂತರ ಉಭಯ ದೇಶಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ತನ್ನ ಕುಟಿಲ ಚಟುವಟಿಕೆಗಳಿಂದ ಹಿಂದೆ ಸರಿಯದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸುತ್ತಿದೆ. ಇಡೀ ದೇಶವೇ ಸರ್ಕಾರ ಮತ್ತು ಸೇನೆಯೊಂದಿಗೆ ನಿಂತು ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸುವ ಪ್ರಯತ್ನಗಳನ್ನು ಬೆಂಬಲಿಸುತ್ತಿವೆ.
ಭಾರತ-ಪಾಕ್ ಸಂಘರ್ಷ ತೀವ್ರಗೊಂಡ ಹಿನ್ನೆಲೆಯಲ್ಲಿ ಶೃಂಗೇರಿ ಮಠದ ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮೀಜಿ ಅವರು ತಮ್ಮ ವಿಜಯ ಯಾತ್ರೆಯನ್ನು ಮುಂದೂಡಿದ್ದಾರೆ. ಈ ಬಗ್ಗೆ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದ ಪೀಠದ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತ-ಪಾಕ್ ಯುದ್ಧದ ವೇಳೆ ಸರ್ಕಾರ ಮತ್ತು ಭಾರತದ ಸಶಸ್ತ್ರ ಪಡೆಗಳ ನಿರಂತರ ಪ್ರಯತ್ನಗಳಿಗೆ ಅಡ್ಡಿಯಾಗುವುದನ್ನು ತಪ್ಪಿಸಲು, ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮೀಜಿ ಅವರ ನೇಪಾಳ, ಜಮ್ಮ-ಕಾಶ್ಮೀರ ಮತ್ತು ಮಧ್ಯಪ್ರದೇಶ, ನವದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಿಗೆ ನಿಗದಿಪಡಿಸಲಾಗಿದ್ದ ವಿಜಯ ಯಾತ್ರೆಯನ್ನು ಮುಂದೂಡಲಾಗಿದೆ.
ಇದನ್ನೂ ಓದಿ : ಭಾರತ-ಪಾಕ್ ಉದ್ವಿಗ್ನತೆ : ಕರ್ನಾಟಕದಲ್ಲೂ ಹೈ ಅಲರ್ಟ್.. ಪೊಲೀಸರಿಗೆ ‘ಹೆಚ್ಚುವರಿ ರಜೆ’ ಕ್ಯಾನ್ಸಲ್ – ಪರಮೇಶ್ವರ್ ಆದೇಶ!
