ನಾವು ಭಾರತದ ವಿರುದ್ಧ ಯುದ್ಧದಲ್ಲಿ ಗೆದ್ದಿದ್ದೇವೆ – ಮತ್ತೆ ಸುಳ್ಳಿನ ಕಥೆ ಕಟ್ಟಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್!​

ನವದೆಹಲಿ : ಕದನ ವಿರಾಮ ಒಪ್ಪಿಕೊಂಡ 3 ಗಂಟೆಯಲ್ಲೇ ಪಾಕ್ ಕಿಡಿಗೇಡಿತನ ಮೆರೆದಿದೆ. ಕದನ ವಿರಾಮ ಉಲ್ಲಂಘಿಸಿ ಭಾರತದ ಮೇಲೆ 100ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿಗೆ ಪ್ರಯತ್ನಿಸಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.

ಈ ನಡುವೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್​ ಶರೀಫ್​ ಸುದ್ದಿಗೋಷ್ಠಿ ನಡೆಸಿ, “ನಮ್ಮ ದಾಳಿಯು ಶತ್ರುಗಳ (ಭಾರತ) ವಾಯುನೆಲೆ ಮತ್ತು ಮದ್ದುಗುಂಡುಗಳನ್ನು ನಾಶಪಡಿಸಿತು. ಅವರ ರಫೇಲ್ ಅನ್ನು ನಾವು ಹೊಡೆದುರುಳಿಸಿದ್ದೇವೆ. ನಾವು ಭಾರತದ ವಿರುದ್ಧ ಗೆದ್ದಿದ್ದೇವೆ ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ, ಕದನ ವಿರಾಮ ಉಲ್ಲಂಘನೆ ಬಗ್ಗೆ ಮಾತನಾಡದೆ, ತಮ್ಮ ಉದ್ದಟತನವನ್ನು ಮುಂದುವರೆಸಿದ್ದಾರೆ.

ಇದಕ್ಕೂ ಮೊದಲು ತನ್ನ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿದ ಶೆಹಬಾಜ್​ ಶರೀಫ್​, “ಕದನ ವಿರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಧನ್ಯವಾದ ಹೇಳುತ್ತೇನೆ. ನಾನು ಚೀನಾ ಅಧ್ಯಕ್ಷ, ಚೀನಾದ ಜನರಿಗೆ ಧನ್ಯವಾದ ಹೇಳುತ್ತೇನೆ. ಸೌದಿ ಅರೇಬಿಯಾ, ಯುಎಇ, ಟರ್ಕಿ, ಕತಾರ್ ಮತ್ತು ಬ್ರಿಟನ್​​​​ ನಾಯಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದಿದ್ದಾರೆ.

ಪಾಕ್​ ಪ್ರಧಾನಿ ಶರೀಫ್ ಸುಳ್ಳಿನ ಸರಮಾಲೆ :
ಸುಳ್ಳು 01: ಭಾರತದ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಿದ್ದೇವೆ
ಸುಳ್ಳು 02: ನಮ್ಮ ದಾಳಿಯಿಂದ ವೈರಿಗಳ ಏರ್ ಬೇಸ್ ನಾಶವಾಗಿದೆ
ಸುಳ್ಳು 03: ನಾವು ಭಾರತದ ರಫೇಲ್ ಹೊಡೆದು ಉರುಳಿಸಿದ್ದೇವೆ
ಸುಳ್ಳು 04: ಅರಬ್​ ದೇಶಗಳ ಬೆಂಬಲ ಪಾಕಿಸ್ತಾನದ ಜೊತೆಗಿದೆ

ಇದನ್ನೂ ಓದಿ : ಕದನ ವಿರಾಮ ಉಲ್ಲಂಘಿಸಿ ಮತ್ತೆ ಬಾಲ ಬಿಚ್ಚಿದ ಪಾಕ್ – ಶ್ರೀನಗರ ಸೇರಿ ಹಲವೆಡೆ ಡ್ರೋನ್ ಅಟ್ಯಾಕ್.. ಭಾರತೀಯ ಸೇನೆಯಿಂದ ದಿಟ್ಟ ಉತ್ತರ!

Btv Kannada
Author: Btv Kannada

Read More