ಚಿತ್ರದುರ್ಗದಲ್ಲಿ ಲಾರಿ-ಕಾರು ಮಧ್ಯೆ ಭೀಕರ ಅಪಘಾತ.. ಮೂವರು ಸ್ಥಳದಲ್ಲೇ ದುರ್ಮರಣ!

ಚಿತ್ರದುರ್ಗ : ಇನ್ನೋವಾ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಸಂಗೀತಾ ( 34 ), ಶ್ಯಾಂ ಬಾಬು(19), ಶಿವನಾಗಲು (60) ಎಂದು ಗುರುತಿಸಲಾಗಿದೆ.

ನಸುಕಿನ ಜಾವ 4:00 ಗಂಟೆ ವೇಳೆಗೆ ಕಣಿವೆ ಆಂಜನೇಯ ದೇಗುಲ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಆಂಧ್ರಪ್ರದೇಶ ಮೂಲದ್ದಾಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಅಶೋಕ್​​ಗೆ ಗಂಭೀರ ಗಾಯಗಳಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ಇದನ್ನೂ ಓದಿ : ಡಿಕೆಶಿ​ ‘ಬ್ರ್ಯಾಂಡ್ ಬೆಂಗಳೂರು’ ಕನಸಿಗೆ ಮತ್ತೊಂದು ಹೆಜ್ಜೆ – ಇಂದು ಅಧಿಕಾರಿಗಳ ಜೊತೆ ಡಿಸಿಎಂ ಸಿಲಿಕಾನ್​ ಸಿಟಿ ರೌಂಡ್ಸ್!​​

Btv Kannada
Author: Btv Kannada

Read More