ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನ – ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಕೃಷ್ಣಪ್ಪ ವಿರುದ್ದ ಸುಮೋಟೋ ಕೇಸ್​ ದಾಖಲು!

ಬೆಂಗಳೂರು : ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನ ಮಾಡಿದ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಕೃಷ್ಣಪ್ಪ ಹಾಗೂ ಇತರರ ವಿರುದ್ದ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ.

ಮೇ 8ರಂದು ಜಯನಗರ 9ನೇ ಬ್ಲಾಕ್​ನಲ್ಲಿರುವ ಬಲಮುರಿ ವಿನಾಯಕ ಸುಬ್ರಹ್ಮಣ್ಯ ದೇವಾಲಯದ ಬಳಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ ರಾಮಮೂರ್ತಿ ಮತ್ತು ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಿಹಿ ಹಂಚುವ ಕಾರ್ಯಕ್ರಮ ಆಯೋಜಿಸಿದ್ದರು.

ಈ ಸಂದರ್ಭ ಸಿಹಿ ಹಂಚುವಾಗ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿಯವರ ಪಕ್ಕದಲ್ಲಿದ್ದ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಕೃಷ್ಣಪ್ಪ ರಾಷ್ಟ್ರಧ್ವಜವನ್ನು ಕರಾವಸ್ತ್ರದಂತೆ ಬಳಸಿಕೊಂಡು ಕೈ ಒರೆಸಿಕೊಂಡಿದ್ದಾರೆ. ರಾಷ್ಟ್ರಧ್ವಜದಲ್ಲಿ ಕೈ ಒರೆಸುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗಿತ್ತು. ಬಳಿಕ ಆಗ್ನೇಯ ವಿಭಾಗ ಉಪ ಪೊಲೀಸ್ ಆಯುಕ್ತರಿಗೂ ಈ ಕುರಿತು ದೂರು ಸಲ್ಲಿಕೆಯಾಗಿತ್ತು. ಈ ಬೆನ್ನಲ್ಲೇ ಇದೀಗ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಕೃಷ್ಣಪ್ಪ ಹಾಗೂ ಇತರರ ವಿರುದ್ದ ತಿಲಕ್ ನಗರ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ – ಪಾಕ್​ ಪರ ವಿಡಿಯೋ ಹರಿಬಿಟ್ಟಿದ್ದ ಯುವಕ ನವಾಜ್​ ಬಂಧನ!

Btv Kannada
Author: Btv Kannada

Read More