ಕರ್ನಾಟಕ ಸರ್ಕಾರವನ್ನು ‘ಸ್ಟುಪಿಡ್’ ಎಂದು ಸಂಸದ ತೇಜಸ್ವಿ ಸೂರ್ಯ ಬೈದಿದ್ದು ಏಕೆ?

ಬೆಂಗಳೂರು : ಬೆಂಗಳೂರು ಹಾಗೂ ತುಮಕೂರು ಮಧ್ಯೆ ಮೆಟ್ರೋ ರೈಲು ಸಂಪರ್ಕ ಯೋಜನೆ ಸಂಬಂಧ ಖಾಸಗಿ ಕಂಪನಿ ಸಲ್ಲಿಸಿದ್ದ ಕಾರ್ಯಸಾಧ್ಯತಾ ಪರೀಕ್ಷಾ ವರದಿಯನ್ನು ಸರ್ಕಾರಕ್ಕೆ ಬಿಎಂಆರ್​ಸಿಎಲ್ ಸಲ್ಲಿಕೆ ಮಾಡಿದ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಬೆಂಗಳೂರು ತುಮಕೂರು ಮೆಟ್ರೋ ಸಂಪರ್ಕ ಒಂದು ಸ್ಟುಪಿಡ್ ಐಡಿಯಾ ಎಂದು ಟೀಕಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ ಅವರು, ಈ ಯೋಜನೆಯನ್ನು ವಿರೋಧಿಸಲು ಕಾರಣವೇನು ಎಂಬುದನ್ನೂ ತಿಳಿಸಿದ್ದಾರೆ.

Btv Kannada
Author: Btv Kannada

Read More