ನವದೆಹಲಿ : ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ. ಇದರೊಂದಿಗೆ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್ಗೆ ಭಾರೀ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.
ಹ್ಯಾಟ್ರಿಕ್ ಗೆಲುವಿನ ಕನಸುಕಂಡಿದ್ದ ಎಎಪಿಯ ಕನಸು ಭಗ್ನವಾಗಿದ್ದು, ಎಎಪಿ ಕಚೇರಿಯಲ್ಲಿ ಮೌನ ಕವಿದಿದೆ. ಮತ್ತೊಂದೆಡೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಶುರುವಾಗಿದೆ. 27 ವರ್ಷದ ನಂತರ ಬಿಜೆಪಿ ದೆಹಲಿಯಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, ಕೇಜ್ರಿವಾಲ್ ವಿರುದ್ಧ ಬಿಜೆಪಿಯ ಪರ್ವೇಶ್ ವರ್ಮಾ 3,182 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ದೆಹಲಿಯಲ್ಲಿ ಎಎಪಿಗೆ ಭಾರೀ ಹಿನ್ನಡೆಯಾದ ಬೆನ್ನಲ್ಲೇ ಈ ‘ಜೀವಮಾನದಲ್ಲಿ ಬಿಜೆಪಿಗೆ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ’ ಎಂದಿದ್ದ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಹಳೆಯ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ : http://ದುನಿಯಾ ವಿಜಯ್-ಶ್ರೇಯಸ್ ಮಂಜು ನಟನೆಯ ‘ಮಾರುತ’ ಚಿತ್ರದ ಡಬ್ಬಿಂಗ್ ಕಂಪ್ಲೀಟ್!
