ತುಮಕೂರು : KSRTC ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಆಲ್ಬುರಿನಲ್ಲಿ ನಡೆದಿದೆ.
23 ವರ್ಷದ ಯೋಗೇಶ್, 25 ವರ್ಷದ ದಯಾನಂದ್ ಮೃತ ದುರ್ದೈವಿಗಳು. ಶುಕ್ರವಾರ ರಾತ್ರಿ ಇಬ್ಬರು ಒಂದೇ ಬೈಕ್ನಲ್ಲಿ ಬಿದರೆಕೆರೆ ಕಡೆಯಿಂದ ತುರುವೇಕೆರೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ತುರುವೇಕೆರೆ ಕಡೆಯಿಂದ ಬಂದ KSRTC ಬಸ್ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಿದರೆಕೆರೆ ಗ್ರಾಮದವರಾದ ಮೃತರು ಬೈಕ್ ಗ್ಯಾರೇಜ್ನಲ್ಲಿ ಕೆಲಸ ಮಾಡಿತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನೊಣವಿನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : http://ರಾಜ್ಯ ಯುವ ಕಾಂಗ್ರೆಸ್ಗೆ ಹೊಸ ಕ್ಯಾಪ್ಟನ್ – ಅಭೂತ ಪೂರ್ವ ಗೆಲುವು ಸಾಧಿಸಿದ ಮಂಜುನಾಥ ಗೌಡ!

Author: Btv Kannada
Post Views: 1,460