ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ ‘ಸಹ್ಯಾದ್ರಿ’ – ವಿಭಿನ್ನವಾಗಿ ಟೈಟಲ್ ಲಾಂಚ್ ಮಾಡಿದ ಚಿತ್ರತಂಡ!

2023ರಲ್ಲಿ‌ ತೆರೆಕಂಡ ‘ಆರ’ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದ ನಟ, ನಿರ್ದೇಶಕ, ಬರಹಗಾರ ‘ಆರ’ ರೋಹಿತ್ ಹಳೇ ಅನುಭವದ ಜೊತೆಗೆ ಹೊಸ ಕನಸನ್ನ ಹೊತ್ತು ಎರಡನೇ ಚಿತ್ರವನ್ನ ಅನೌನ್ಸ್ ಮಾಡಿದ್ದು, ಚಿತ್ರಕ್ಕೆ ‘ಸಹ್ಯಾದ್ರಿ’ ಎಂಬ ಹೆಸರಿಟ್ಟಿದ್ದಾರೆ.

ದೈವ ಹಾಗೂ ದುಷ್ಟ ಶಕ್ತಿಯ ನಡುವಿನ ಸಂಘರ್ಷವನ್ನ ಆಧರಿಸಿ ‘ಆರ’ ಮಾಡಿದ್ದ ರೋಹಿತ್ ಅವರು, ಈ ಬಾರಿ ಇನ್ನೊಂದು ಕೌತುಕ ವಿಚಾರವನ್ನ ಹೇಳಲು ಹೊರಟ್ಟಿದ್ದಾರೆ. ಸಹ್ಯಾದ್ರಿ ಪಂಚ ಭಾಷೆಯಲ್ಲಿ ಬರಲಿದ್ದು, ಟೈಟಲ್, ಟೀಸರ್ ಮೂಲಕ ಇದು ಪ್ಯಾನ್ ಇಂಡಿಯಾ ಸಿನಿಮಾ ಅನ್ನೋದನ್ನ ಸೂಚಿಸಿದ್ದಾರೆ.

ಹೌದು.. ‘ಸಹ್ಯಾದ್ರಿ’ ಚಿತ್ರದ ಕಥಾಹಂದರ ಆಧ್ಯಾತ್ಮಿಕ ದರೋಡೆಕೋರ ಪ್ರಕಾರವಾಗಿದ್ದು, ಮೆದುಳಿನಲ್ಲಿ ಹೆಚ್ಚಿನ ನರಕೋಶಗಳನ್ನು ಹೊಂದಿರುವ ಅಕಾಲಿಕ ಮಗು ವಯಸ್ಸಾದಂತೆ, ಎಲ್ಲಾ ಶಕ್ತಿಯನ್ನು ತಡೆಹಿಡಿಯುವ ವಿಜಯಶಾಲಿಯಾಗುತ್ತದೆ. ಈ ಲೈನ್ ಇಟ್ಟುಕೊಂಡು ಈ ಸಲ ರೋಹಿತ್ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ.


‘ಆರ’ ಚಿತ್ರದ ಮೂಲಕ ಸಿನಿಮಾದ ವ್ಯಾಪಾರ ವ್ಯವಹಾರವನ್ನ ಸಂಪೂರ್ಣವಾಗಿ ಅರಿತುಕೊಂಡಿರುವ ರೋಹಿತ್ ಮತ್ತು ತಂಡ 2ವರ್ಷಗಳಿಂದ ಎರಡನೇ ಸಿನಿಮಾ ಯೋಜನೆಯನ್ನ ಅಚ್ಚುಕಟ್ಟಾಗಿ ರೂಪಿಸಿದ್ದು, ಈ ಬಾರಿ ಗೆದ್ದೇ ಗೆಲ್ಲುವ ದೊಡ್ಡದಾಗಿ ನಿಲ್ಲುವ ಛಲದಲ್ಲಿ ‘ಸಹ್ಯಾದ್ರಿ’ಯನ್ನ ರೂಪಿಸುವ ಪ್ರಯತ್ನ ಮಾಡ್ತಿದೆ.

ಮೊದಲಿಗೆ ಸಹ್ಯಾದ್ರಿ ಚಿತ್ರವನ್ನ ಕನ್ನಡದಲ್ಲಿ ಚಿತ್ರಿಸಿ ನಂತರ ಇತರ ಭಾಷೆಗಳಿಗೆ ಡಬ್ ಮಾಡಲು ಚಿತ್ರತಂಡ ಚಿಂತನೆ ನಡೆಸಿದೆ. ಸದ್ಯದಕ್ಕೆ ವಿಭಿನ್ನವಾಗಿ ಅಪ್ಪಟ ಕನ್ನಡದ ಸೊಗಡಲ್ಲಿ ‘ಸಹ್ಯಾದ್ರಿ’ಯ ತಪ್ಪಲಲ್ಲಿ ನಿಂತು ಶೀರ್ಷಕೆ ಅನಾವರಣ ಮಾಡಿರೋ ಆರ ರೋಹಿತ್, ಶೀಘ್ರವೇ ಚಿತ್ರದ ಮುಹೂರ್ತ ಮಾಡಿ ಚಿತ್ರೀಕರಣ ಆರಂಭಿಸುವ ಕೆಲಸದಲ್ಲಿದ್ದಾರೆ. ಮಂಗಳೂರು ಸೇರಿದಂತೆ ಬಹುತೇಕ ಪಶ್ಚಿಮ ಘಟ್ಟಗಳಲ್ಲೇ ‘ಸಹ್ಯಾದ್ರಿ’ ಚಿತ್ರದ ಚಿತ್ರೀಕರಣ ನಡೆಯಲಿದ್ದು, ಎಲ್ಲಾ ಅಂದುಕೊಂಡಂತೆ ‘ಸಹ್ಯಾದ್ರಿ‌’ 2026ರ ಜುಲೈನಲ್ಲಿ ತೆರೆಗೆ ಬರಲಿದೆ.

ಎಆರ್ ಫಿಲ್ಮ್ಸ್ ಬ್ಯಾನರ್ ನಡಿಯಲ್ಲಿ ‘ಸಹ್ಯಾದ್ರಿ’ ಸಿನಿಮಾವನ್ನು ರೇಣುಕಾ ಪಿ.ಎನ್ ನಿರ್ಮಿಸ್ತಿದ್ದಾರೆ.  ರೋಹಿತ್ ಈ ಚಿತ್ರವನ್ನ ಬರೆದು ನಿರ್ದೇಶಿಸಿ, ನಟಿಸ್ತಿದ್ದಾರೆ. ಚಿತ್ರಕ್ಕೆ ವಿಲಿಯಲ್ ಡೇವಿಡ್ ಸಹಾಯಕ, ವಿನೋದ್ ಲೋಕಣ್ಣನವರ್ ಛಾಯಾಗ್ರಹಣ ಇರಲಿದೆ. ಹಾಗೆಯೇ ಅಜನೀಶ್ ಲೋಕನಾಥ್ ಸಂಗೀತ ಸಹಾಯಕ, ನವನಾಥ್ ವಾಸುದೇವ್ ಸಂಗೀತ ಸಂಯೋಜಿಸ್ತಿದ್ದಾರೆ. ತಾಂತ್ರಿಕವಾಗಿ ನಿಪುಣರ ತಂಡ ಕಟ್ಟಿಕೊಂಡಿರುವ ರೋಹಿತ್, ಪ್ರಸ್ತುತ ಉದ್ಯಮದ ಸ್ಥಿಗತಿಯನ್ನ ಅಧ್ಯಾಯನ ಮಾಡಿ ‘ಸಹ್ಯಾದ್ರಿ’ ಚಿತ್ರವನ್ನ ಮಾಡೋದಕ್ಕೆ ಕೈ ಹಾಕಿದ್ದು, ಈ ತಂಡದ ನಡೆ ಉದ್ಯಮದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ : ಮೈಸೂರಿನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ – ಕೈ,‌ ಕಾಲು, ರುಂಡ ಕತ್ತರಿಸಿ ಕೆರೆಗೆ ಎಸೆದ ದುಷ್ಕರ್ಮಿಗಳು!

Btv Kannada
Author: Btv Kannada

Read More