ನಟ ದರ್ಶನ್​ಗೆ ಗುಡ್​ನ್ಯೂಸ್​ – ಫಾರಿನ್​ಗೆ ಹೋಗಲು ‘ದಾಸ’ನಿಗೆ ಕೋರ್ಟ್​ ಗ್ರೀನ್​ ಸಿಗ್ನಲ್!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್​ಗೆ ಗುಡ್​ನ್ಯೂಸ್​ ಸಿಕ್ಕಿದೆ. ಭಾರತ ಬಿಟ್ಟು ವಿದೇಶಕ್ಕೆ ತೆರಳಲು ಕೋರ್ಟ್​ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸದ್ಯ ಷರತ್ತುಬದ್ಧ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ವಿದೇಶಕ್ಕೆ ತೆರಳಲು ಬೆಂಗಳೂರಿನ 64ನೇ CCH ಕೋರ್ಟ್​ ಅನುಮತಿ ನೀಡಿದೆ.

ಡೆವಿಲ್‌ ಸಿನಿಮಾದ ಚಿತ್ರೀಕರಣಕ್ಕಾಗಿ 25 ದಿನಗಳ ಕಾಲ ದುಬೈ ಮತ್ತು ಯೂರೋಪ್‌ಗೆ ತೆರಳಲು ಅವಕಾಶ ಕೋರಿ ನಟ ದರ್ಶನ್ ನ್ಯಾಯಾಲಯದ ಅನುಮತಿ ಕೇಳಿದ್ದರು. ಜೂನ್ 1 ರಿಂದ 25ರ ವರೆಗೆ ವಿದೇಶಕ್ಕೆ ತೆರಳಲು ಅವಕಾಶ ನೀಡುವಂತೆ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ ದರ್ಶನ್‌ ಅರ್ಜಿ ಸಲ್ಲಿಸಿದ್ದರು. ಇದೀಗ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 64ನೇ CCH ಕೋರ್ಟ್ ಪುರಸ್ಕರಿಸಿದ್ದು, ಫಾರಿನ್​ಗೆ ಹೋಗಲು ನ್ಯಾಯಮೂರ್ತಿ ಐ.ಪಿ ನಾಯ್ಕ್ ಆದೇಶ ಹೊರಡಿಸಿದ್ದಾರೆ.

ದರ್ಶನ್​ಗೆ ಜಾಮೀನು ನೀಡುವಾಗ ಬೆಂಗಳೂರು ಬಿಟ್ಟು ಹೊರ ಹೋಗುವಂತಿಲ್ಲ ಎಂದು ಹೈಕೋರ್ಟ್‌ ಷರತ್ತು ವಿಧಿಸಿತ್ತು. ನಂತರ ಸಿನಿಮಾ ಚಿತ್ರೀಕರಣ ಕಾರಣ ನೀಡಿ ಹೊರರಾಜ್ಯಗಳಿಗೆ ಹೋಗಲು ಷರತ್ತು ಸಡಿಲಿಸಿಕೊಂಡಿದ್ದರು. ಇದೀಗ ವಿದೇಶಗಳಲ್ಲಿ ಸಿನಿಮಾ ಚಿತ್ರೀಕರಣ ಮಾಡಬೇಕಿರೋ ಕಾರಣ ಫಾರಿನ್​ಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಡೆವಿಲ್ ಸಿನಿಮಾ ತಂಡಕ್ಕೂ ಬಿಗ್ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ : ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಜೂ.27ಕ್ಕೆ ರಿಲೀಸ್!

Btv Kannada
Author: Btv Kannada

Read More