ಕರ್ನಾಟಕದಲ್ಲಿ ಮಹಾಮಾರಿ ಕೊರೊನಾಗೆ 3ನೇ ಬಲಿ – ಟೆಸ್ಟಿಂಗ್ ಕಡ್ಡಾಯಗೊಳಿಸಿದ ಕೇಂದ್ರ!

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಆಟ ಶುರು ಮಾಡಿರೋ ಕೊರೊನಾ ಹೆಮ್ಮಾರಿ ಸದ್ದಿಲ್ಲದೇ ಆರ್ಭಟಿಸ್ತಿದೆ. ಶರವೇಗದಲ್ಲಿ ಹೆಚ್ಚಾಗ್ತಿರೋ ಕೊರೊನಾ ಕೇಸ್​​ಗಳು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ನಿನ್ನೆ(ಮೇ 30) ಮೈಸೂರಲ್ಲಿ 63 ವರ್ಷದ ವ್ಯಕ್ತಿ ಕೋವಿಡ್​​ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. SARI ಗುಣಲಕ್ಷಣ ಹೊಂದಿರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆಯೂ ಕೂಡ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾಗೆ 3ನೇ ಬಲಿ : ಮೈಸೂರಿನ 63 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಇವರು ಕಿಡ್ನಿ ವೈಫಲ್ಯವಾಗಿ ಮೇ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೇ 25ರಂದು ಮೃತಪಟ್ಟಿದ್ದಾರೆ. ಬಳಿಕ ಮೃತಪಟ್ಟ ವ್ಯಕ್ತಿಯ ಕೋವಿಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಮೃತ ವ್ಯಕ್ತಿ 2 ಡೋಸ್ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದರು ಎಂದು ತಿಳದುಬಂದಿದೆ.

ಕೋವಿಡ್ ಟೆಸ್ಟ್ ಕಡ್ಡಾಯ : ಕೊರೊನಾ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಟೆಸ್ಟ್​​ಗಳನ್ನು ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. SARI ಗುಣಲಕ್ಷಣ ಹೊಂದಿರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದ್ದು, ಸ್ವ್ಯಾಬ್​​ ಪಡೆದ ದಿನವೇ ಪ್ರಯೋಗಾಲಯಕ್ಕೆ ಕಳಿಸಬೇಕು ಎಂದು ಸೂಚಿಸಿದೆ.

ಇನ್ನು ಜೂನ್ ತಿಂಗಳಲ್ಲಿ ಮಳೆಗಾಲದ ಜತೆಗೆ ವಾತಾವರಣದ ಉಷ್ಣಾಂಶ ಕೂಡ ತಗ್ಗಲ್ಲಿದ್ದು, ಸೋಂಕು ಮತ್ತಷ್ಟು ಹೆಚ್ಚಾಗೋ ಸಾಧ್ಯತೆಯಿದೆ. ಶಾಲೆಗಳು ಕೂಡ ಆರಂಭವಾಗಿದ್ದು, ಮಕ್ಕಳಿಗೆ ಸೋಂಕು ಹರಡದಂತೆ ಪೋಷಕರು ಎಚ್ಚರಿಕೆ ವಹಿಸಬೇಕಿದೆ.

  • ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 234ಕ್ಕೆ ಏರಿಕೆ
  • ಕಳೆದ 24 ಗಂಟೆಯಲ್ಲಿ 114 ಕೇಸ್​​ ಪ್ರಕರಣಗಳು ಪತ್ತೆ
  • ಕೊರೊನಾಗೆ ಒಬ್ಬರು‌ ಬಲಿ, ಸಾವಿನ ಸಂಖ್ಯೆ 3ಕ್ಕೆ ಏರಿಕೆ
  • 24 ಗಂಟೆಯಲ್ಲಿ 27 ಮಂದಿ ಸೋಂಕಿನಿಂದ ಗುಣಮುಖ
  • ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.24.7

ಇದನ್ನೂ ಓದಿ : ಇಂದು ನಿವೃತ್ತಿಯಾಗಲಿರುವ ಬಿಡಿಎ ಕಮಿಷನರ್ ಜಯರಾಮ್ ವಿರುದ್ಧ ಸಾಲು ಸಾಲು ದೂರುಗಳು – ಸಮಗ್ರ ತನಿಖೆಗೆ ಸರ್ಕಾರ ನಿರ್ಧಾರ!

Btv Kannada
Author: Btv Kannada

Read More