ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಏಕಕಾಲಕ್ಕೆ ಹಲವು ಜಿಲ್ಲೆಗಳಲ್ಲಿ ರೇಡ್​​!

ಬೆಂಗಳೂರು : ಕರ್ನಾಟದ ಹಲವು ಕಡೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ನಿದ್ದೆಯಲ್ಲಿದ್ದ ಭ್ರಷ್ಟ ಅಧಿಕಾರಿಗಳಿಗೆ ಬಿಗ್​ ಶಾಕ್ ನೀಡಿದೆ. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ, ಹಾವೇರಿ, ಉಡುಪಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಿದ್ದು, ಆಸ್ತಿ-ಪಾಸ್ತಿ ಬಗ್ಗೆ ದಾಖಲೆ ಪರಿಶೀಲಿಸುತ್ತಿದ್ದಾರೆ.

ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ : ಬಳ್ಳಾರಿ PWD ಸುಪರಿಡೆಂಟ್ ಇಂಜಿನಿಯರ್ ಅಮೀನ್ ಮುಕ್ತಾರ್ ಮನೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಕೋಟಿ ಕೋಟಿ ರೂ.ಮೌಲ್ಯದ ಆಸ್ತಿ ಪತ್ರ ಪತ್ತೆಯಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿ 25 ಏಕರೆ ಜಮೀನಿನ ಆಸ್ತಿ ಪತ್ರ, ಕಲಬುರಗಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಪೆಟ್ರೋಲ್ ಬಂಕ್, ಒಂದು ಕ್ರಶರ್ ಮಷೀನ್ ಲೈಸನ್ಸ್ ಸೇರಿದಂತೆ ಇತರೆ ಆಸ್ತಿ ಪತ್ರಗಳು ಪತ್ತೆಯಾಗಿವೆ.

ಅಮೀನ್ ಮುಕ್ತಾರ್
ಅಮೀನ್ ಮುಕ್ತಾರ್

ಉಡುಪಿಯಲ್ಲೂ ಭ್ರಷ್ಟ ಅಧಿಕಾರಿಗೆ ಶಾಕ್ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫಿಸರ್ ಗಿರೀಶ್ ರಾವ್ ಮೆನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್ ಪಿ ಮಂಜಿನಾಥ ನೇತೃತ್ವದಲ್ಲಿ ದಾಳಿ, ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ದಾಳಿ ಮಾಡಿದ್ದು, ತಲಾಶ್ ನಡೆಸಿದ್ದಾರೆ.

ಗಿರೀಶ್ ರಾವ್
ಗಿರೀಶ್ ರಾವ್

ಧಾರವಾಡದಲ್ಲಿಯೂ ಲೋಕಾಯುಕ್ತ ದಾಳಿ : ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನೀಯರ್ ಎಚ್. ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್ ಮೇಲೆ ದಾಳಿಯಾಗಿದೆ. ಧಾರವಾಡದ ಡಿಸಿ ಕಾಂಪೌಂಡ್‌ನಲ್ಲಿರೋ ಕಚೇರಿ, ಕೆಸಿಡಿ ವೃತ್ತದ ಬಳಿಯ ಮನೆ ಮೇಲೆ ದಾಳಿ ಮಾಡಲಾಗಿದ್ದು,ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಚ್. ಸುರೇಶ
ಎಚ್. ಸುರೇಶ

ಹಾವೇರಿ ಲೋಕಾಯುಕ್ತ ಜಂಟಿ ಕಾರ್ಯಚರಣೆ : ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದ ಗ್ರಾಮ ಪಂಚಾಯತಿ ಪಿಡಿಓ ರಾಮಕೃಷ್ಣಪ್ಪ ಕಚೇರಿ ಮತ್ತು ಮನೆಯ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿಗಳಿಕೆ ಮಾಡಿರೋ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿಗಳಿಂದ ಜಂಟಿ ಕಾರ್ಯಚರಣೆ ನಡೆಸಿದ್ದು, ರಾಮಕೃಷ್ಣಪ್ಪ ಗುಡಗೇರಿ ಗ್ರಾಮ ಪಂಚಾಯತಿ ಅಧಿಕಾರಿ ಕಚೇರಿ ಮತ್ತು ಹುಬ್ಬಳ್ಳಿ, ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಪಿಡಿಓ ರಾಮಕೃಷ್ಣಪ್ಪ
ಪಿಡಿಓ ರಾಮಕೃಷ್ಣಪ್ಪ

ಬಾಗಲಕೋಟೆ ಡಿಸಿ ಅಧಿಕಾರಿಗೆ ಶಾಕ್ : ಬಾಗಲಕೋಟೆ ಡಿಸಿ ಕಚೇರಿ ಲೆಕ್ಕಪತ್ರ ವಿಭಾಗದ ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್ ತತ್ರಾಣಿಗೂ ಲೋಕಾಯುಕ್ತ ಶಾಕ್ ಕೊಟ್ಟಿದೆ. ಅಮೀನಗಢ ಪಟ್ಟಣದಲ್ಲಿರುವ ಶ್ರೀಶೈಲ್ ತತ್ರಾಣಿ ಅವರ ಮನೆ ಹಾಗೂ ಜ್ಯುವೆಲ್ಲರಿ ಶಾಪ್ ಮೇಲೆ‌ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಾಗಲಕೋಟೆ ಲೋಕಾಯುಕ್ತ DySP ನೇತೃತ್ವದಲ್ಲಿ ಸಿದ್ದೇಶ್ವರ ನೇತೃತ್ವದಲ್ಲಿ ದಾಳಿಯಾಗಿದೆ.

ಗದಗ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಗಂಗಾಧರ ಶಿರೋಳ ಮನೆ, ಕಚೇರಿ ಹಾಗೂ ಅಳಿಯ, ಭಾವನ ಮನೆಗಳು ಸೇರಿ ಆರು ಕಡೆ ರೇಡ್​ ಮಾಡಲಾಗಿದೆ. ಗದಗ ನಗರದ ಹುಡ್ಕೋ ಕಾಲೋನಿಯ ಗಂಗಾಧರ ಶಿರೋಳ ಮನೆ, ಗದಗ ನಗರದ ಅಳಿಯ ವಿಜಯ ಯಳಮಲಿ, ಭಾವ ನಾಗರಾಜ್ ಅಕ್ಕಿ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಎಸ್.ಎಸ್ ಶೆಟ್ಟರ್ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

 ಗಂಗಾಧರ ಶಿರೋಳ
ಗಂಗಾಧರ ಶಿರೋಳ

ಇದನ್ನೂ ಓದಿ : HMT ಡಿನೋಟಿಫಿಕೇಷನ್ ಕೇಸ್​ : ಐಎಫ್‌ಎಸ್ ಅಧಿಕಾರಿ ಸೇರಿ ಹಲವರ ಅಮಾನತಿಗೆ ಸಚಿವ ಈಶ್ವರ್​ ಖಂಡ್ರೆ ಶಿಫಾರಸು!

Btv Kannada
Author: Btv Kannada

Read More