ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತಡೆ – ವಿಜಯೇಂದ್ರ ವಿರುದ್ಧ ಗೆದ್ದ ಸುಧಾಕರ್!​

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನೋಟಿಸ್​ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಯತ್ನಾಳ್​ಗೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ಇದರಿಂದ ಮೇಲುಗೈ ಸಾಧಿಸಿದ್ದ ವಿಜಯೇಂದ್ರಗೂ ಸಹ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತಡೆ ನೀಡಿದ್ದು, ಈ ಮೂಲಕ ಸಂಸದ ಸುಧಾಕರ್​ ಮೇಲುಗೈ ಸಾಧಿಸಿದ್ದಾರೆ.​

ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಆಯ್ಕೆ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ಮಾತಿನ ಸಮರಕ್ಕೆ ನಾಂದಿಯಾಡಿತ್ತು. ಇನ್ನು ಜಿಲ್ಲಾಧ್ಯಕ್ಷ ಆಯ್ಕೆಯಲ್ಲಿ ಬಿವೈ ವಿಜಯೇಂದ್ರ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು.

ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಆಯ್ಕೆಯನ್ನು ಸುಧಾಕರ್ ತೀವ್ರವಾಗಿ ವಿರೋಧಿಸಿದ್ದರು. ಅಲ್ಲದೆ ಬಿಜೆಪಿ ಹೈಕಮಾಂಡ್ ಮೇಲೂ ಒತ್ತಡ ಹೇರಿದ್ದು ಇದೀಗ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಆಯ್ಕಗೆ ಹೈಕಮಾಂಡ್ ತಡೆ ನೀಡಿದೆ. ಅಲ್ಲದೆ ಈ ಬಗ್ಗೆ ಬಿ.ವೈ ವಿಜಯೇಂದ್ರಗೆ ಪತ್ರ ಬರೆದಿರುವ ಬಿಜೆಪಿ ಹೈಕಮಾಂಡ್ ಬಿ.ಸಂದೀಪ್ ಆಯ್ಕೆಗೆ ತಡೆ ನೀಡುವಂತೆ ಸೂಚಿಸಿದೆ. ಇದರೊಂದಿಗೆ ವಿಜಯೇಂದ್ರ ವಿರುದ್ಧ ತೊಡೆತಟ್ಟಿದ ಸುಧಾಕರ್​ ತಮ್ಮ ತಾಕತ್ತು ತೋರಿಸಿದ್ದಾರೆ.

ಇದನ್ನೂ ಓದಿ : http://‘ಭುವನಂ ಗಗನಂ’ಗೆ ಚಂದನವನ ಸಾಥ್.. ಫೆ.14ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್!

Btv Kannada
Author: Btv Kannada

Read More