ಕಾಲ್ತುಳಿತ ದುರಂತದಲ್ಲಿ 11 ಮಂದಿಯ ದಾರುಣ ಸಾವು – ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲು!

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದ ಸಂಭ್ರಮದ ನಡುವೆ ಆಘಾತ, ಆಕ್ರಂದನ.. ಹುಚ್ಚೆದ್ದು ಕುಣಿಯುತ್ತಿದ್ದ ಅಭಿಮಾನಿಗಳ ಹೃದಯ ಕ್ಷಣದಲ್ಲೇ ಸ್ತಬ್ಧವಾಗಿದೆ. ಸಂಭ್ರಮಾಚರಣೆ ವೇಳೆ ಕೊನೆಯುಸಿರು.. ಇದಕ್ಕೆ ಸಾಕ್ಷಿ ಆಗಿದ್ದು ಸಿಲಿಕಾನ್ ಸಿಟಿಯ ಚಿನ್ನಸ್ವಾಮಿ ಸ್ಟೇಡಿಯಂ.

ಹೌದು.. ರಾಯಲ್​ ಚಾಲೆಂಜರ್ಸ್​ ಬೆಂಗಳೂರು 18 ವರ್ಷದ ಐಪಿಎಲ್​ ಕಪ್ ಗೆದ್ದಿದೆ. ಈ ಸಂಭ್ರಮಾಚರಣೆ ಎಲ್ಲೆಡೆ ಮನೆ ಮಾಡಿರುವಾಗಲೇ ಭಾರೀ ದುರಂತ ಸಂಭವಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ವಿಜಯೋತ್ಸವಕ್ಕೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರು. ಕಾಲಿಡಲು ಸ್ಥಳವಿಲ್ಲದಷ್ಟು ಜಾಗ ಬಿಡದ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.​ 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. 11 ಮಂದಿಯ ದಾರುಣ ಸಾವಿನ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಸಂಭ್ರಮದಲ್ಲಿ ಮೃತರು – ಅವರ ವಯಸ್ಸು

  • ಭೂಮಿಕ- 20 ವರ್ಷ
  • ಸಹನಾ-19 ವರ್ಷ
  • ಪೂರ್ಣಚಂದ್ರ- 32 ವರ್ಷ
  • ಚಿನ್ಮಯಿ- 19 ವರ್ಷ
  • ದಿವಾನ್ಷಿ- 13 ವರ್ಷ
  • ಶ್ರವಣ್- 20 ವರ್ಷ
  • ದೇವಿ- 29 ವರ್ಷ
  • ಶಿವಲಿಂಗ್- 17 ವರ್ಷ
  • ಮನೋಜ್​- 33 ವರ್ಷ
  • ಅಕ್ಷತಾ-
  • ಪ್ರಜ್ವಲ್​- 21 ವರ್ಷ

ಇದನ್ನೂ ಓದಿ : RCB ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ – ಇಂದು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ!

Btv Kannada
Author: Btv Kannada

Read More