ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ – ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ!

ಉಡುಪಿ : ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ ನಡೆದಿದೆ. ದೈವ ನುಡಿದಂತೆ ದೇಗುಲದಲ್ಲಿ ಹುಂಡಿ ಕದ್ದ ಕಳ್ಳ ಕದ್ದಿರುವ ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾನೆ.

ಉಡುಪಿಯ ಹೆಬ್ರಿ ತಾಲೂಕು ಮುದ್ರಾಡಿ ದೇಗುಲದಲ್ಲಿ ಈ ಘಟನೆ ನಡೆದಿದೆ. ಮೇ 25 ರಂದು ಕಳ್ಳನೋರ್ವ ಮುದ್ರಾಡಿ ಆದಿಶಕ್ತಿ ದೇಗುಲದ ಕಲ್ಕುಡ-ಕಲ್ಲುರ್ಟಿ, ಕೊರಗಜ್ಜ ಸನ್ನಿದಾನದ ಹುಂಡಿ ಕದ್ದು ಪರಾರಿಯಾಗಿದ್ದ. ಇದ್ರಿಂದ ಬೇಸರಗೊಂಡ ಧರ್ಮದರ್ಶಿ ಸುಕುಮಾರ್ ಮೋಹನ್ ದೈವದ ಮೊರೆ ಹೋಗಿದ್ದರು.

ಈ ವೇಳೆ ಕಳ್ಳ ಮತ್ತೆ ಬಂದು ಸಿಕ್ಕಿ ಬೀಳುತ್ತಾನೆ. ಹತ್ತು ದಿನಗಳಲ್ಲಿ ಕಳ್ಳನನನ್ನು ಪತ್ತೆ ಮಾಡಿಕೊಡುವುದಾಗಿ ದೈವ ಅಭಯ ನೀಡಿತ್ತು. ಅದ್ರಂತೆ ಮೂರೇ ದಿನಗಳಲ್ಲಿ ಕಳ್ಳ ಎರಡನೇ ಬಾರಿ ಹುಂಡಿ ಕದಿಯಲು ಬಂದಿದ್ದು, ಭಕ್ತರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ದಾವಣಗೆರೆ ಮೂಲದ ಸಲ್ಮಾನ್ ಎಂಬಾತ ಸೆರೆಯಾದ ಕಳ್ಳನಾಗಿದ್ದು, ದೈವದ ಅಭಯ ನಿಜವಾಗಿದ್ದಕ್ಕೆ ಭಕ್ತರು ಸಂತಸ ಪಟ್ಟಿದ್ದಾರೆ.

ಇದನ್ನೂ ಓದಿ : ಕಾಲ್ತುಳಿತ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ – ಜೂ.​​4ರಂದೇ DPRA ಕಾರ್ಯದರ್ಶಿಗೆ ಅಪಾಯದ ಎಚ್ಚರಿಕೆ ನೀಡಿದ್ದ ಡಿಸಿಪಿ!

Btv Kannada
Author: Btv Kannada

Read More