ಭೀಕರವಾಗಿ ಡಿವೈಡರ್​ಗೆ ಡಿಕ್ಕಿ ಹೊಡೆದ​ ಕಾರು – ಸ್ಥಳದಲ್ಲೇ ಇಬ್ಬರು ಸಾವು!

ಕೋಲಾರ : ಕೆಜಿಎಫ್​ ತಾಲೂಕಿನ ಕೃಷ್ಣಾವರಂ ಬಳಿ ಚೆನ್ನೈ- ಬೆಂಗಳೂರು ಎಕ್ಸ್​ಪ್ರೆಸ್​​ ಕಾರಿಡಾರ್​ ಹೈವೇ ಸಂಪರ್ಕ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಕೃಷ್ಣಾವರಂ ಗ್ರಾಮದ ಆಕಾಶ್​ (33) ಹಾಗೂ ಜಾನ್ ​(32) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನು ಮೂವರು ಅಪ್ಪು, ತಮಿಳರಸನ್​ ಹಾಗೂ ನಾಗರಾಜು ಎಂಬುವರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ತಕ್ಷಣ ಬೆಮೆಲ್​ ನಗರದ ಸಂಭ್ರಮ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ಚೆನೈ ಬೆಂಗಳೂರು ಎಕ್ಸ್​ಪ್ರೆಸ್​​ ಕಾರಿಡಾರ್​ ಹೈವೇ ಸಂಪರ್ಕ ರಸ್ತೆ ಬಳಿ ಸ್ವಿಪ್ಟ್​ ಕಾರು ಡಿವೈಡರ್​ಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಕಣ್ಮುಚ್ಚಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಗುದ್ದಿದ ರಭಸಕ್ಕೆ ಕಾರು ಎಲ್ಲ ನಜ್ಜುಗುಜ್ಜಾಗಿದೆ. ಬೆಮೆಲ್​ ನಗರದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ಮೋದಿ ಸಾಧನೆ ಅಳೆಯುವ ಅರ್ಹತೆ ಸಿದ್ದರಾಮಯ್ಯಗಿಲ್ಲ – ಝಿರೋ ಮಾರ್ಕ್ಸ್ ಎಂದಿದ್ದ ಸಿಎಂಗೆ ಪ್ರತಾಪ್ ಸಿಂಹ ಟಾಂಗ್!

Btv Kannada
Author: Btv Kannada

Read More