ಹೈಕೋರ್ಟ್​ನಲ್ಲಿ ನಿಖಿಲ್ ಸೋಸಲೆ ಅರ್ಜಿ ವಿಚಾರಣೆ ಮುಕ್ತಾಯ – ನಾಳೆ ಮಧ್ಯಂತರ ತೀರ್ಪು ಪ್ರಕಟ!

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಭಿಮಾನಿಗಳು ಮೃತಪಟ್ಟ ಪ್ರಕರಣ ಸಂಬಂಧ ಆರ್​ಸಿಬಿ ಮಾರ್ಕೆಂಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ತಮ್ಮ ಬಂಧನ ಪ್ರಶ್ನಿಸಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಮಾವಿನಕೆರೆ ಮತ್ತಿತರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣಕುಮಾರ್ ಪೀಠದಲ್ಲಿ ನಿಖಿಲ್ ಸೋಸಲೆ ಅರ್ಜಿ ವಿಚಾರಣೆ ನಡೆದಿದೆ. ನಿಖಿಲ್ ಪರವಾಗಿ ಸಂದೇಶ ಚೌಟ ವಾದ ಮಂಡಿಸಿದ್ದು, ರಾಜ್ಯ ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡನೆ ಮಾಡಿದ್ದಾರೆ. ಇಂದು ವಾದ ಪ್ರತಿವಾದ ಮುಕ್ತಾಯವಾಗಿದ್ದು, ನಾಳೆ ಮಧ್ಯಾಹ್ನ 2:30ಕ್ಕೆ ಹೈಕೋರ್ಟ್​ ಮಧ್ಯಂತರ ತೀರ್ಪು ಪ್ರಕಟಿಸಲಿದೆ.

ಇದನ್ನೂ ಓದಿ : ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ – 12 ಕೆ.ಜಿ ಗಾಂಜಾ ವಶಕ್ಕೆ!

Btv Kannada
Author: Btv Kannada

Read More