ಕಾಂತಾರ ಸೆಟ್​​ನಲ್ಲಿ ಮತ್ತೊಂದು ಭಾರೀ ಅವಘಡ – ಚಿತ್ರೀಕರಣದ ವೇಳೆ ಜಲಾಶಯದಲ್ಲಿ ಮಗುಚಿ ಬಿದ್ದ ದೋಣಿ!

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಚಿತ್ರದ ಶೂಟಿಂಗ್ ಆರಂಭ ಮಾಡಿದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಇದೀಗ ಮತ್ತೊಂದು ಅಪಘಾತ ಸಿನಿಮಾ ಸೆಟ್​ನಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ​ ವೇಳೆ ಬೋಟ್ ಒಂದು ಮಗುಚಿ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿರುವ ಮಾಸ್ತಿಕಟ್ಟೆ ಮಾಣಿ ಜಲಾಶಯದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್​ ನಡೆಯುತ್ತಿತ್ತು. ಇದೇ ವೇಳೆ ಏಕಾಏಕಿ ದೋಣಿ ಮಗುಚಿ ಬಿದ್ದಿದೆ.

ಇನ್ನೂ, ಮಗುಚಿ ಬಿದ್ದ ದೋಣಿಯಲ್ಲಿ ನಟ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು ಇದ್ದರು. ಆದ್ರೆ ದಿಢೀರ್​ ಅಂತ ಬೋಟು ಮಗುಚಿದ್ದರಿಂದ ಕಲಾವಿದರು ಹಾಗೂ ತಂತ್ರಜ್ಞರು ಈಜುತ್ತಲೇ ದಡ ಸೇರಿದ್ದಾರೆ. ಆದ್ರೆ ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವ ಹಾನಿ ಆಗಿಲ್ಲ. ಆದರೆ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿವೆ. ಈ ಘಟನೆಯಿಂದಾಗಿ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡ ಆತಂಕಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ : ಕನ್ನಡದಲ್ಲಿ ಉತ್ತರಿಸಿದ ಉಪನ್ಯಾಸಕನ ಕೆಲಸಕ್ಕೆ ಕುತ್ತು – ಕನ್ನಡಿಗರ ಆಕ್ರೋಶದ ಬೆನ್ನಲ್ಲೇ ರಾಜೀನಾಮೆ ರದ್ದುಪಡಿಸಿದ ಆರ್​ವಿ ಕಾಲೇಜು!

Btv Kannada
Author: Btv Kannada

Read More