Download Our App

Follow us

Home » ಮೆಟ್ರೋ » ನೆಲಮಂಗಲ : ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರದ ಗಲಾಟೆ ಸಾವಿನಲ್ಲಿ ಅಂತ್ಯ..!

ನೆಲಮಂಗಲ : ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರದ ಗಲಾಟೆ ಸಾವಿನಲ್ಲಿ ಅಂತ್ಯ..!

ಬೆಂಗಳೂರು : ನೆಲಮಂಗಲದ ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರ ಗಲಾಟೆಗೆ ತಿರುಗಿ ಸಾವಿನಲ್ಲಿ ಅಂತ್ಯವಾಗಿದೆ. ಜ್ಯಾಕ್ ರಾಡ್​​ನಿಂದ ವ್ಯಕ್ತಿಯ ತಲೆಗೆ ಹಲ್ಲೆ ಮಾಡಿದ್ದು, ಗಾಯಾಳಿಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಮಲ್ಲರಬಾಣವಾಡಿ ಕ್ರಾಸ್ ಸಮೀಪದ ಗ್ರೀನ್ ಪಾರ್ಕ್ ಡಾಬಾ ಬಳಿ ಗಲಾಟೆ ನಡೆದಿದ್ದು, 29 ವರ್ಷದ ಪ್ರದೀಪ್ ಸಾವನ್ನಪ್ಪಿರುವ ದುರ್ದೈವಿ. ಬೆಂಗಳೂರು ಉತ್ತರ ತಾಲ್ಲೂಕಿನ ಶ್ಯಾನಬೋಗನಹಳ್ಳಿ ಮಹೇಶ್​ ಎಂಬಾತ ಪ್ರದೀಪ್ ತಲೆಗೆ ಹಲ್ಲೆ ನಡೆಸಿದ್ದ.

ಮಹೇಶನ ಜೊತೆಗಿದ್ದ ಬೋರಲಿಂಗ ಮತ್ತು ಸುನೀಲ್ ಇಬ್ಬರನ್ನೂ ಬಂಧಿಸಿ ವಿಚಾರಣೆ ಮಾಡಲಾಗ್ತಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕೋಮಲ್ ನಟನೆಯ ‘ಯಲಾಕುನ್ನಿ’ ಸಿನಿಮಾದ ಚಿತ್ರೀಕರಣ ಮುಕ್ತಾಯ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here