ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಮತ್ತವರ ಗ್ಯಾಂಗ್ ಕಂಬಿ ಹಿಂದೆ ಬಂಧಿಯಾಗಿದೆ. ಈ ಕೇಸ್ ತೀವ್ರ ಸಂಚಲನ ಸೃಷ್ಟಿಸಿರುವಾಗ ಪೊಲೀಸರ ತನಿಖೆಯು ಚುರುಕಾಗಿದ್ದು, ಅರೆಸ್ಟ್ ಆಗಿರೊ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ರೇಣುಕಾಸ್ವಾಮಿ ಮರ್ಡರ್ ಕೇಸ್ನಲ್ಲಿ ಆರೋಪಿಗಳಿಗೆ ಶಿಕ್ಷೆಯಾಗ್ಬೇಕು. ಕೋರ್ಟ್ ವಿಚಾರಣೆ ವೇಳೆ ಆರೋಪಿಗಳು ಉಲ್ಟಾ ಹೊಡೆಯಬಾರದು ಎಂಬ ನಿರ್ಧಾರ ಮಾಡಿರುವ ಪೊಲೀಸರು, ಸಾಧ್ಯವಾದಷ್ಟು ಎಲ್ಲಾ ಆರೋಪಿಗಳಿಂದ CRPC 164 ಹೇಳಿಕೆ ದಾಖಲಿಸಲು ಸಿದ್ಧತೆ ಮಾಡುತ್ತಿದ್ದಾರೆ.
ಈಗಾಗಲೇ ನಗರ ಪೊಲೀಸ್ ಆಯುಕ್ತರಿಂದಲೂ ತನಿಖಾ ಅಧಿಕಾರಿಗಳಿಗೆ ಸೂಚನೆ ದೊರೆತಿದೆ. ಆರೋಪಿಗಳಿಂದ 164 ಹೇಳಿಕೆ ದಾಖಲಿಸಿದ್ರೆ ಕೋರ್ಟ್ ವಿಚಾರಣೆ ವೇಳೆ ಉಲ್ಟಾ ಹೊಡೆಯಲು ಸಾಧ್ಯವಿಲ್ಲ. ಹೀಗಾಗಿ ಸಾಧ್ಯವಾದಷ್ಟು ಎಲ್ಲಾ ಆರೋಪಿಗಳಿಂದ 164 ಹೇಳಿಕೆ ದಾಖಲಿಸಲು ಪೊಲೀಸರು ನಿರ್ಧಾರ ಮಾಡಿದ್ದು, ಈ ಸ್ಟೇಟ್ಮೆಂಟ್ಗಳೇ ಭವಿಷ್ಯದಲ್ಲಿ ದರ್ಶನ್ಗೆ ಕಂಟಕವಾಗಲಿದೆಯೇ ಎಂದು ಕಾದುನೋಡಬೇಕಾಗಿದೆ.
ಇದನ್ನೂ ಓದಿ : ವಿಷ್ಣು ಮಂಚು ನಾಯಕನಾಗಿ ನಟಿಸಿರುವ ‘ಕಣ್ಣಪ್ಪ’ ಚಿತ್ರದ ಟೀಸರ್ ರಿಲೀಸ್..!