Download Our App

Follow us

Home » ಅಪರಾಧ » ವಾಲ್ಮೀಕಿ ಹಗರಣದ ಬಂಧಿತ ಆರೋಪಿಗೆ ಮಾಜಿ ಸಚಿವ ನಾಗೇಂದ್ರ ಆಪ್ತರಿಂದ ಜೀವ ಬೆದರಿಕೆ..!

ವಾಲ್ಮೀಕಿ ಹಗರಣದ ಬಂಧಿತ ಆರೋಪಿಗೆ ಮಾಜಿ ಸಚಿವ ನಾಗೇಂದ್ರ ಆಪ್ತರಿಂದ ಜೀವ ಬೆದರಿಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದ A-13 ಆರೋಪಿಯಾಗಿರುವ ಸತ್ಯನಾರಾಯಣ ವರ್ಮಾ ಅವರನ್ನು ಜೂ.4ರಂದು ಅರೆಸ್ಟ್ ಮಾಡಲಾಗಿದೆ. ಇದೀಗ ಬಂಧಿತ ಆರೋಪಿ ಸತ್ಯನಾರಾಯಣ ವರ್ಮಾ ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಗಂಭೀರ ಆರೋಪ‌ ಮಾಡಿದ್ದಾರೆ.

ಮಾಜಿ ಸಚಿವ ನಾಗೇಂದ್ರ ಆಪ್ತರು ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ. ಇಂದು ಸತ್ಯನಾರಾಯಣ ವರ್ಮಾ ಸೇರಿ‌ ಮೂವರು ಆರೋಪಿಗಳನ್ನ 3ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ತನಗೆ ಜೀವ ಬೆದರಿಕೆ ಇರೋದಾಗಿ ಅಳಲು ತೋಡಿಕೊಂಡಿದ್ದಾರೆ. ಬಂಧನಕ್ಕೂ ಮುನ್ನ ಮನೆಗೆ ಬಂದು ಇಡೀ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ, ಕಸ್ಟಡಿಯಲ್ಲಿದ್ದ ವೇಳೆ ನಾಗೇಂದ್ರ ಪಿಎ ನೆಕ್ಕುಂಡಿ ನಾಗರಾಜ್ ಆಪ್ತರು ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕೋರ್ಟ್ ನಿಂದ ಹೊರಗೆ ಕರೆದೊಯ್ಯುವ ವೇಳೆ ಹಲ್ಲೆಗೆ ಯತ್ನಿಸಿದ್ದಾರೆಂದು ಆರೋಪ ಮಾಡಿದ್ದಾರೆ. ನ್ಯಾಯಾಧೀಶರು ಆರೋಪಿ ಹೇಳಿಕೆಯನ್ನ ದಾಖಲು ಮಾಡಿಕೊಂಡು, ಹಲ್ಲೆಗೆ ಯತ್ನಿಸಿರುವ ಆರೋಪ ಸಂಬಂಧ ತನಿಖೆ ನಡೆಸುವಂತೆ ಹಲಸೂರುಗೇಟ್ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ವಿರುದ್ಧ ತೆರಿಗೆ ವಂಚನೆ ಆರೋಪ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here