Download Our App

Follow us

Home » ರಾಜಕೀಯ » ವಿಧಾನಸಭೆಯಲ್ಲಿ ಕೈ-ಕಮಲ ಕೋಲಾಹಲ – ಅಶೋಕ್​ ನೇತೃತ್ವದಲ್ಲಿ ಸದನದಿಂದ ಹೊರ ನಡೆದ ಬಿಜೆಪಿ ಸದಸ್ಯರು..!

ವಿಧಾನಸಭೆಯಲ್ಲಿ ಕೈ-ಕಮಲ ಕೋಲಾಹಲ – ಅಶೋಕ್​ ನೇತೃತ್ವದಲ್ಲಿ ಸದನದಿಂದ ಹೊರ ನಡೆದ ಬಿಜೆಪಿ ಸದಸ್ಯರು..!

ಬೆಳಗಾವಿ : ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿದೆ. ಅಧಿವೇಶನದ ನಾಲ್ಕನೇ ದಿನ ಬಹುತೇಕ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಂಬಂಧವೇ ಚರ್ಚೆ ನಡೆದಿತ್ತು. ಇದೀಗ ಐದನೇ ದಿನದ ಕಲಾಪದಲ್ಲಿ ವಕ್ಫ್​​ ಚರ್ಚೆಗೆ ಬಿಜೆಪಿ ಸದಸ್ಯರ ಬಿಗಿಪಟ್ಟು ಹಿಡಿದ್ದಾರೆ.

ವಿಧಾನಸಭೆಯಲ್ಲಿ ಕೈ-ಕಮಲ ಕೋಲಾಹಲ ಜೋರಾಗಿದ್ದು, ವಕ್ಫ್​​ ಚರ್ಚೆಗೆ ಬಿಜೆಪಿ ಸದಸ್ಯರು ಬಿಗಿಪಟ್ಟು ಹಿಡಿದರೇ , ಮುನಿ ಹನಿ ಪ್ರಕರಣ ಪ್ರಸ್ತಾಪಕ್ಕೆ ಕಾಂಗ್ರೆಸ್​ ಹಠ ಹಿಡಿದಿದ್ದಾರೆ. ವಿಪಕ್ಷ ನಾಯಕ ಆರ್​.ಅಶೋಕ್​​​ ವಕ್ಫ್​​ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಅದಕ್ಕೂ ಮುನ್ನ ಮುನಿರತ್ನ ಜಾತಿನಿಂದನೆ ಬಗ್ಗೆ ಚರ್ಚೆಗೆ ಪಟ್ಟು ಹಿಡಿದ ಮಳವಳ್ಳಿ ಶಾಸಕ ಪಿ.ನರೇಂದ್ರಸ್ವಾಮಿ ಅವರು, ಮುನಿರತ್ನ ವಿಚಾರ ಪ್ರಸ್ತಾಪಕ್ಕೆ ಅವಕಾಶ ಕೊಡಿ ಎಂದು ಆಗ್ರಹಿಸಿದರು.

ಈ ವೇಳೆ ಗದ್ದಲ, ಕೋಲಾಹಲದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ನಮಗೆ ಮಾತ್ನಾಡಲು ಅವಕಾಶ ಕೊಡ್ತಿಲ್ಲ ಎಂದು ಆಕ್ರೋಶ ಹೊರಹಾಕಿದ ಬಿಜೆಪಿ ಸದಸ್ಯರು ಅಶೋಕ್​ ನೇತೃತ್ವದಲ್ಲಿ ಸದನದಿಂದ ಹೊರ ನಡೆದಿದ್ದಾರೆ.

ಇದನ್ನೂ ಓದಿ  :  RBI ಕಚೇರಿ ಸ್ಫೋಟಿಸುವುದಾಗಿ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ – ತಿಂಗಳಲ್ಲಿ ಎರಡನೇ ಘಟನೆ!

Leave a Comment

DG Ad

RELATED LATEST NEWS

Top Headlines

ಸ್ಯಾಂಡಲ್​ವುಡ್​​ನಲ್ಲಿ ‘ಮಲ್ಟಿ’ ಸ್ಟಾರ್ಸ್​ ಹಂಗಾಮಾ – ಸ್ವಾತಂತ್ರ್ಯ ದಿನಾಚರಣೆಗೆ ಬಹುನಿರೀಕ್ಷಿತ ‘45’ ಸಿನಿಮಾ ರಿಲೀಸ್..!

2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್​​ನ ಅನೌನ್ಸ್

Live Cricket

Add Your Heading Text Here