ಬೆಳಗಾವಿ : ಮಕ್ಕಳ ಕಳ್ಳರ ಮೇಲೆ ಅಥಣಿ ಪೋಲಿಸರು ಫೈರಿಂಗ್ ಮಾಡಿ ಇಬ್ಬರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಮೂರು ತಂಡ ರಚಿಸಿ ಅಪಹರಣಕಾರರಿಗೆ ಪೊಲೀಸರು ಶೋಧ ನಡೆಸಿದ್ದಾರೆ.
ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದ ಮಹಾರಾಷ್ಟ್ರ ಗಡಿಯಲ್ಲಿ ಮಕ್ಕಳ ಕಳ್ಳರನ್ನು ತಡೆಗಟ್ಟಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಮಕ್ಕಳ ಕಳ್ಳರ ಕಾಲಿಗೆ ಗುಂಡು ಹಾರಿಸಿದ್ದಾರೆ.
ಅಂಕಲಿಯ ರವಿಕಿರಣ ಕಮಲಾಕರ, ಮಹಾರಾಷ್ಟ್ರದ ಸಾಂಭಾ ಕಾಂಬ್ಳೆ, ಬಿಹಾರ ಮೂಲದ ಶಾರುಖ್ ಶೇಖ್ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಆರೋಪಿ ಸಂಬಾಜಿ ಕಾಂಬಳೆ ಕಾಲಿಗೆ ಪೊಲೀಸರ ಗುಂಡೇಟು ಬಿದ್ದಿದ್ದು, ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಸಂಬಾಜಿಗೆ ಟ್ರೀಟ್ಮೆಂಟ್ ನೀಡುತ್ತಿದ್ದಾರೆ.
ಇದನ್ನೂ ಓದಿ : ಕೋರ್ಟ್ನ ಅಮೂಲ್ಯ ಸಮಯವನ್ನು ಉಳಿಸಲು ಮತ್ತೊಂದು ಹೆಜ್ಜೆ ಇಟ್ಟ ನ್ಯಾ. ಎಂ. ನಾಗಪ್ರಸನ್ನ..!
Post Views: 117