Download Our App

Follow us

Home » ಮೆಟ್ರೋ » ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್ : ಸಿಡಿದೆದ್ದ ಬಿಜೆಪಿ ನಾಯಕರು..!

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್ : ಸಿಡಿದೆದ್ದ ಬಿಜೆಪಿ ನಾಯಕರು..!

ಬೆಂಗಳೂರು : ಬೆಂಗಳೂರಿನ ನಗರ್ತಪೇಟೆಯಲ್ಲಿ ನಮಾಜ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಈ ವಿಚಾರವಾಗಿ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ನಗರ್ತಪೇಟೆಯಲ್ಲಿ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು, ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರ್ತಪೇಟೆಯಲ್ಲಿ ಪೊಲೀಸರು-ಶಾಸಕ ಸುರೇಶ್ ಕುಮಾರ್ ಮಧ್ಯೆ ವಾಗ್ವಾದ ನಡೆದಿದೆ. ಪ್ರತಿಭಟನೆ ತಡೆಯಲು ಯತ್ನಿಸಿದ್ದಕ್ಕೆ ಸುರೇಶ್ ಕುಮಾರ್ ಫುಲ್ ಗರಂ ಆಗಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಸುರೇಶ್ ಕುಮಾರ್, ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು-ಹಿಂದೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆದಿದೆ.

ಪ್ರತಿಭಟನಾ ಸ್ಥಳಕ್ಕೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿ ಹಿಂದೂ ಕಾರ್ಯಕರ್ತರಿಗೆ ಸಾಥ್​ ನೀಡಿದ್ದಾರೆ. ತೇಜಸ್ವಿ ಸೂರ್ಯ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಹಿಂದೂ ಕಾರ್ಯಕರ್ತರ ಜೊತೆಗೆ ವರ್ತಕರೂ ಸಿಡಿದೆದ್ದಿದ್ದಾರೆ. ರ್ಯಾಲಿ ನಡೆಸಲು ಮುಂದಾಗಿದ್ದ ಕಾರ್ಯಕರ್ತರಿಗೆ ಪೊಲೀಸರು ತಡೆ ಹೇರಿದ್ದು, ಸ್ಥಳದಲ್ಲಿ ಪ್ರತಿಭಟನಾಕಾರರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಇದನ್ನೂ ಓದಿ : ವಿಜಯಪುರದಲ್ಲಿ ಕುಡಿಯುವ ನೀರಿಗಾಗಿ ಟವರ್ ಏರಿ ಯುವಕನ ಹುಚ್ಚಾಟ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here