ಬೆಂಗಳೂರು : ಸಿಸಿಬಿ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ನೈಜೀರಿಯಾ ಪುಂಡರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು 8 ಮಂದಿ ನೈಜೀರಿಯಾ ಪುಂಡರನ್ನು ರಾಜನಕುಂಟೆ ಬಳಿ ವಶಕ್ಕೆ ಪಡೆದಿದೆ.
ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿನ ಹಲ್ಲೆಯನ್ನು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಗಂಭೀರವಾಗಿ ಪರಿಗಣಿಸಿದ್ದರು. ಹಲ್ಲೆ ನಡೆಸಿದ್ದ ಪುಂಡರ ಹೆಡೆಮುರಿ ಕಟ್ಟಲು ಸಿಸಿಬಿ ಪೊಲೀಸರ ಜತೆಗೆ ಡಿಸ್ವಾಟ್ ಪಡೆಯನ್ನು ನಿಯೋಜಿಸಲಾಗಿತ್ತು. ಶುಕ್ರವಾರ ಸಂಜೆ ಕಾರ್ಯಾಚರಣೆಗಿಳಿದ ಡಿಸ್ವಾಟ್ ಮತ್ತು ಸಿಸಿಬಿ ಪೊಲೀಸರು ಇದೀಗ ನೈಜೀರಿಯಾದ ಎಂಟು ಮಂದಿಯ ಹೆಡೆಮುರಿ ಕಟ್ಟಿದ್ದಾರೆ.
ಘಟನೆಯ ಹಿನ್ನೆಲೆ : ಸಿಸಿಬಿ ಆರೋಪಿಯೊಬ್ಬನಿಂದ 4 KG MDMA ಡ್ರಗ್ಸ್ ವಶಕ್ಕೆ ಪಡೆದುಕೊಂಡಿತ್ತು. ಅದೇ ಆರೋಪಿ ರಾಜಾನುಕುಂಟೆ ವ್ಯಾಪ್ತಿಯಲ್ಲಿ ಮತ್ತಷ್ಟು ಡ್ರಗ್ಸ್ ಇರುವ ಮಾಹಿತಿ ನೀಡಿದ್ದ. ಈ ಹಿನ್ನೆಲೆ (ಏ.18) ರಾತ್ರಿ ಸಿಸಿಬಿ ಪೊಲೀಸರು ರಾಜನಕುಂಟೆ ಪೊಲೀಸ್ ಠಾಣೆಯ ಮಾವಳ್ಳಿ ಪುರದಲ್ಲಿ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ಗಳು ಸೇರಿಕೊಂಡು ಸಿಸಿಬಿ ಇನ್ಸ್ ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಐದಕ್ಕೂ ಹೆಚ್ಚು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ತಕ್ಷಣ ಸಿಸಿಬಿ ಪೊಲೀಸರು 112 ಗೆ ಕರೆ ಮಾಡಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ರಾಜಾನುಕುಂಟೆ ಹೊಯ್ಸಳ ಸಿಬ್ಬಂದಿಗಳು ಬಂದಿದ್ದರು. ಹೊಯ್ಸಳ ಸಿಬ್ಬಂದಿ ಮೇಲೂ ನೈಜೀರಿಯಾ ಪ್ರಜೆಗಳು ಹಲ್ಲೆ ನೈಜೀರಿಯಾ ಮಾಡಿ ಪರಾರಿಯಾಗಿದ್ದರು.
ಇನ್ನು ಸಿಸಿಬಿ ಒಂದು ಜೀಪ್ ಹಾಗೂ ರಾಜಾನುಕುಂಟೆ ಪೊಲೀಸ್ ಠಾಣೆಯ ಹೊಯ್ಸಳ ಜೀಪ್ನ ಗಾಜನ್ನು ಕಬ್ಬಿಣದ ರಾಡು, ಕಲ್ಲಿನಿಂದ ಪುಡಿ ಮಾಡಿದ್ದರು. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಆಸ್ಪತ್ರೆಗೆ ಆಗಮಿಸಿ ಗಾಯಾಳು ಸಿಬ್ಬಂದಿ ಆರೋಗ್ಯ ವಿಚಾರಸಿದರು. ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದರು. ಇದೀಗ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಪ್ರಧಾನಿ ಮೋದಿ ಬೆಂಗಳೂರು ಎಂಟ್ರಿಗೂ ಮುನ್ನ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರೊಟೆಸ್ಟ್..!
Post Views: 72