ಬೆಂಗಳೂರು : ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಮೂವರು ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ ಘಟನೆ ನಿನ್ನೆ ಬೆಂಗಳೂರಿನಲ್ಲಿ ನಡೆದಿತ್ತು. ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರನ್ನು ವಿದ್ಯಾರಣ್ಯಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಘಟನೆ ಖಂಡಿಸಿ ವಿದ್ಯಾರಣ್ಯಪುರ ಪೋಲೀಸ್ ಠಾಣೆ ಮುಂದೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡುಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆ ಮಾಡುತ್ತಿರುವ ನಾಯಕರು ಹಲ್ಲೆಯಲ್ಲಿ ಭಾಗಿಯಾಗಿದ್ದ ಎಲ್ಲ ಕಿಡಿಗೇಡಿಗಳನ್ನು ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ.
ವಿದ್ಯಾರಣ್ಯಪುರ ಠಾಣೆ ಮುಂದೆ ಜಮಾಯಿಸ್ತಿರೋ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಜೈಶ್ರೀರಾಮ ಘೋಷಣೆ ಕೂಗುತ್ತಿದ್ದಾರೆ. ಇನ್ನು ಪ್ರತಿಭಟನೆ ಹಿನ್ನಲೆ ವಿದ್ಯಾರಣ್ಯಪುರ ಠಾಣೆ ಮುಂದೆ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ : ಖಾಕಿ ಕೋಟಿ ದಂಧೆ : ಮೆಜೆಸ್ಟಿಕ್ನಲ್ಲಿ ಖಾಸಗಿ ಬಸ್ಗೆ ಬೆಂಕಿ ಬಿದ್ದಿರೋ ಹಿಂದಿದೆ ಮಹಾ ಭ್ರಷ್ಟಾಚಾರ – ಪೊಲೀಸರ ಲಂಚದ ವಿಡಿಯೋ ಲೀಕ್..!