ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಚಿವ ಬಿ.ಎನ್ ನಾಗೇಂದ್ರ ಅವರ ಮೊಬೈಲ್ನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ಸುಮಾರು 2 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದ್ದು, ಫ್ಲಾಟ್, ಮನೆಯ ಇಂಚಿಂಚೂ ಬಿಡದೇ ಪರಿಶೀಲನೆ ನಡೆಸ್ತಿದ್ದಾರೆ.
ಬಹುಕೋಟಿ ಹಗರಣ ಕೇಸ್ಗೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದ ಮರುದಿನವೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಶಾಸಕ ಬಸನಗೌಡ ದದ್ದಲ್, ಯ್ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯ ಮಾಜಿ ಸಚಿವ ನಾಗೇಂದ್ರ ಅವರ ಮೊಬೈಲ್ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ವಾಲ್ಮೀಕಿ ನಿಗಮ ಹಗರಣ ಕೇಸ್ – ಯೂನಿಯನ್ ಬ್ಯಾಂಕ್ ಅಧಿಕಾರಿಗಳಿಗೂ ED ಶಾಕ್..!