Download Our App

Follow us

Home » ಜಿಲ್ಲೆ » ಬಾಗಲಕೋಟೆ : ಕಾಲೇಜು ಫೀಜ್​​ ಹಣದಲ್ಲಿ ದಂಡ ಕಟ್ಟಿದ ಯುವಕ, ನಂತರ ಲೇಡಿ PSI ಮಾಡಿದ್ದೇನು ಗೊತ್ತಾ?

ಬಾಗಲಕೋಟೆ : ಕಾಲೇಜು ಫೀಜ್​​ ಹಣದಲ್ಲಿ ದಂಡ ಕಟ್ಟಿದ ಯುವಕ, ನಂತರ ಲೇಡಿ PSI ಮಾಡಿದ್ದೇನು ಗೊತ್ತಾ?

ಬಾಗಲಕೋಟೆ : ತ್ರಿಬಲ್ ರೈಡ್​​ನಲ್ಲಿ ಬಂದ ಯುವಕರಿಗೆ ಪಿಎಸ್​​ಐ ಬುದ್ಧಿವಾದ ಹೇಳಿದ ಘಟನೆ ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ನಡೆದಿದೆ.

ಕಾಲೇಜ್ ಅಡ್ಮಿಷನ್​​ಗೆ ಹೊರಟಿದ್ದ ವಿದ್ಯಾರ್ಥಿಗಳು ತ್ರಿಬಲ್ ರೈಡ್‌ ಮೂಲಕ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಈ ವೇಳೆ ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ಹಣ ಕೊಟ್ಟಿದ್ದಾನೆ. ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಬಾಲಕನನ್ನು ಅಪ್ಪಿಕೊಂಡು  ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್​​ ನೀಡಬೇಡಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

ಇದನ್ನೂ ಓದಿ : ‘ಕಬಂಧ’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್​​..!

Leave a Comment

DG Ad

RELATED LATEST NEWS

Top Headlines

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ FIR ದಾಖಲು – ಕಾರಣ?

ಬೆಂಗಳೂರು : ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ

Live Cricket

Add Your Heading Text Here