ಗುಲ್ಬರ್ಗ : ಸಂಸದ ಉಮೇಶ್ ಜಾಧವ್ ಅವರ ಬಲಗೈ ಬಂಟನ ಬರ್ಬರ ಹತ್ಯೆ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡನಾಗಿದ್ದಾನೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ.
ಗಿರೀಶ್ ಅವರನ್ನು ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ಬಿಎಸ್ಎನ್ಎಲ್ ಸಲಹಾ ಸಮಿತಿಗೆ ನಿರ್ದೇಶಕರಾಗಿ ಆಯ್ಕೆ ಮಾಡಿದ್ದರು. ಸಲಹಾ ಸಮಿತಿ ನಿರ್ದೇಶಕ ನೇಮಕ ಹಿನ್ನೆಲೆಯಲ್ಲಿ ಪಾರ್ಟಿ ಕೊಡುವ ನೆಪದಲ್ಲಿ ಜಮೀನಿಗೆ ಕರೆಸಿ ಸ್ನೇಹಿತರೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಸಾಗನೂರ ಗ್ರಾಮದ ಸಚಿನ್ ಮತ್ತು ಗ್ಯಾಂಗ್ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕಣ್ಣಿಗೆ ಕಾರಪುಡಿ ಎರಚಿ ಬರ್ಬರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸದ್ಯ ಆರೋಪಿಗಾಗಿ ತೀವ್ರ ಶೋಧಕಾರ್ಯ ನಡೆಯುತ್ತಿದ್ದು, ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ : ಇಂದೇ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ : ದೆಹಲಿಯಲ್ಲಿ ಮಹ್ವತದ ಸಭೆ ನಡೆಸಿದ ಪ್ರಧಾನಿ ಮೋದಿ..!