ಬೆಂಗಳೂರು : ನಿಕಟಪೂರ್ವ ಬಿಬಿಎಂಪಿ ಸದಸ್ಯೆ ಶ್ರೀಮತಿ ಮಂಜುಳ ವಿಜಯಕುಮಾರ್ ಹಾಗೂ ನಾಮ ನಿರ್ದೇಶಿತ ಪಾಲಿಕೆ ಸದಸ್ಯ ಹೆಚ್.ವಿಜಯಕುಮಾರ್ ಕಾಂಗ್ರೆಸ್ ಪಕ್ಷ ತೊರೆದು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
![ಶ್ರೀಮತಿ ಮಂಜುಳ ವಿಜಯಕುಮಾರ್](https://btvkannada.com/wp-content/uploads/2024/04/WhatsApp-Image-2024-04-19-at-8.44.48-AM-1-271x300.jpeg)
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ, ಕೇಂದ್ರ ಲೋಕಸಭಾ ಅಭ್ಯರ್ಥಿ ಶ್ರೀ ಪಿ.ಸಿ.ಮೋಹನ್, ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಶಿವನಗರ, ಮಹಾಗಣಪತಿನಗರ, ಮಾಜಿ ಪಾಲಿಕೆ ಸದಸ್ಯರ ನಿವಾಸ ಎದುರು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
![ಹೆಚ್.ವಿಜಯಕುಮಾರ್](https://btvkannada.com/wp-content/uploads/2024/04/WhatsApp-Image-2024-04-19-at-8.44.48-AM-290x300.jpeg)
ದೇಶದ ಹಿತಕ್ಕಾಗಿ ಮತ್ತು ಪ್ರಧಾನಿ ನರೇಂದ್ರಮೋದಿರವರ ಆಡಳಿತ ಮೆಚ್ಚಿ ಶಿವನಗರ ವಾರ್ಡ್ ನಿಕಟಪೂರ್ವ ಬಿಬಿಎಂಪಿ ಸದಸ್ಯೆ ಶ್ರೀಮತಿ ಮಂಜುಳ ವಿಜಯಕುಮಾರ್ ಮತ್ತು ನಾಮ ನಿರ್ದೇಶಿತ ಪಾಲಿಕೆ ಸದಸ್ಯ ಹೆಚ್.ವಿಜಯಕುಮಾರ್ ರವರು ಕಾಂಗ್ರೆಸ್ ಪಕ್ಷ ತೊರೆದು ಇಂದು ಸಂಜೆ 5-30ಕ್ಕೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಇದನ್ನೂ ಓದಿ : ಪ್ರಜಾಪ್ರಭುತ್ವದ ಎಲೆಕ್ಷನ್ ಹಬ್ಬ ಇಂದಿನಿಂದ ಶುರು – 21 ರಾಜ್ಯಗಳ 102 ಸ್ಥಾನಗಳಿಗೆ ಇಂದು ಮತದಾನ..!