Download Our App

Follow us

Home » ಅಪರಾಧ » ಬೆಂಗಳೂರು : ಬಾಡಿಗೆ ಮನೆ ನೋಡಲು ಹೋದವರನ್ನ ಕೂಡಿ ಹಾಕಿ ಹ*ಲ್ಲೆ – ಏಳು ಮಂದಿ ಅರೆಸ್ಟ್..!

ಬೆಂಗಳೂರು : ಬಾಡಿಗೆ ಮನೆ ನೋಡಲು ಹೋದವರನ್ನ ಕೂಡಿ ಹಾಕಿ ಹ*ಲ್ಲೆ – ಏಳು ಮಂದಿ ಅರೆಸ್ಟ್..!

ಬೆಂಗಳೂರು : ಬಾಡಿಗೆ ಮನೆ ನೋಡಲು ಹೋದವರನ್ನ ಕೂಡಿ ಹಾಕಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿವೇಕ್  ಕುಮಾರ್, ಅನಮಿತ್ರ, ಯುವರಾಜ್ , ಅರಿತ್ರೋಜಿತ್, ಪ್ರಜೀತ್, ಅಲೆನ್ ಕರನ್  ಬಂಧಿತ ಆರೋಪಿಗಳು. ಕೃಷ್ಣ ಬಾಜಪೇಯಿ ಹಾಗು ಯುವರಾಜ್  ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿದ್ದಲ್ಲದೇ ಬೆತ್ತಲೆ ವಿಡಿಯೋ ಮಾಡಿದ್ದಾರೆ.

ಹಲ್ಲೆಗೊಳಗಾದ ವಿದ್ಯಾರ್ಥಿಗಳು ಹಾಗೂ ಹಲ್ಲೆ ನಡೆಸಿದ್ದ ವಿದ್ಯಾರ್ಥಿಗಳು ಎಲ್ಲರೂ ರಾಜಾನುಕುಂಟೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು. ಎರಡು ಗುಂಪು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳು 15 ದಿನಗಳ ಹಿಂದೆ ಕಾಲೇಜಿನಲ್ಲಿ ಗಲಾಟೆ ಮಾಡ್ಕೊಂಡಿದ್ರು. ಇದೇ ದ್ವೇಷ ಹಲ್ಲೆಗೆ ಕಾರಣ ಎನ್ನಲಾಗಿದೆ.

ಕಾಲೇಜಿನಲ್ಲಿ ನಡೆದ ಸಣ್ಣ ಜಗಳಕ್ಕೆ ಕಿಡ್ನಾಪ್ ಮಾಡಿ ಹಲ್ಲೆ ನಡೆಸಿ ಸುಲಿಗೆ ಮಾಡಿ, ಐದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ವಿಚಾರಣೆ ವೇಳೆ ಬೆಳಕಿಗೆ‌ ಬಂದಿದೆ. ಏಳು ಜನರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ : ವಿಜಯ್ ದೇವರಕೊಂಡಗೆ ಆಕ್ಷನ್ ಕಟ್ ಹೇಳ್ತಾರಾ ಪ್ರಶಾಂತ್ ನೀಲ್? ಭೇಟಿ ಹಿಂದಿನ ಸೀಕ್ರೆಟ್ ಏನು ಗೊತ್ತಾ?

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here