Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಜಲಮಂಡಳಿ ಯಡವಟ್ಟು – ಪೈಪ್‌ಲೈನ್‌ಗೆ ತೋಡಿದ್ದ ಹಳ್ಳಕ್ಕೆ ಬಿದ್ದು ಓರ್ವ ಸಾ*ವು, ಇಬ್ಬರ ಸ್ಥಿತಿ ಗಂಭೀರ..!

ಬೆಂಗಳೂರಿನಲ್ಲಿ ಜಲಮಂಡಳಿ ಯಡವಟ್ಟು – ಪೈಪ್‌ಲೈನ್‌ಗೆ ತೋಡಿದ್ದ ಹಳ್ಳಕ್ಕೆ ಬಿದ್ದು ಓರ್ವ ಸಾ*ವು, ಇಬ್ಬರ ಸ್ಥಿತಿ ಗಂಭೀರ..!

ಬೆಂಗಳೂರು : ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿರೋ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್​ನಲ್ಲಿ ನಡೆದಿದೆ. ಮೂವರು ಯುವಕರು ಒಂದೇ ಬೈಕ್​ನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಳೆದ ವರ್ಷದ‌ ಹಿಂದೆ ಇದೇ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಕಾರ್ಮಿಕ ಸಾವನ್ನಪ್ಪಿದ್ದ. ಇದೀಗ ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಕೂಡಲೇ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸ್ ದಾಖಲಿಸಿದ್ದಾರೆ.

20 ವರ್ಷದ ಸದ್ದಾಂ ಪಾಷ ಮೃತ ಯುವಕ, ಗಂಭೀರ ಗಾಯಗೊಂಡವರನ್ನು ಉಮ್ರಾನ್​ ಪಾಷ ಹಾಗೂ ಮುಬಾರಕ್ ಎಂದು ಗುರುತಿಸಲಾಗಿದೆ. ಇನ್ನು, ಗುಂಡಿ ಪಕ್ಕ ಯಾವುದೇ ಬ್ಯಾರಿಕೇಡ್ ಅಳವಡಿಸದಿರೋದು ಈ ಘಟನೆಗೆ ಕಾರಣ ಎಂದು ಸ್ಥಳೀಯರು ಅಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ : ಇಂದು ಹಿರಿಸಾವೆಯಲ್ಲಿರುವ ಫಾರ್ಮ್ ಹೌಸ್​ನಲ್ಲಿ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here