ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್ಮೆಂಟ್ನ ಬೇಸ್ಮೆಂಟ್ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ.
ಯುವಕರ ಹೊಡೆದಾಟ ವಿಡಿಯೋ ಎಕ್ಸ್ನಲ್ಲಿ ಶೇರ್ ಮಾಡಿ ಹಲವು ಬಾರಿ ಗಲಾಟೆ ಮಾಡಿಕೊಂಡು ತೊಂದರೆ ನೀಡ್ತಿದ್ದಾರೆ ಅಂತ ವೈದ್ಯ ದೀಪಕ್ ಪ್ರಸಾದ್ ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಅಪಾರ್ಮೆಂಟ್ ಎದುರು ಎಣ್ಣೆ ಅಂಗಡಿಯಿದೆ ಇದರಿಂದ ತುಂಬಾ ತೊಂದರೆ ಆಗ್ತಿದೆ. ಪೊಲೀಸರಿಗೆ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ. ಹೀಗಾಗಿ ಇದೀಗ ವೈದ್ಯ ದೀಪಕ್ ಪ್ರಸಾದ್ ಸೂಕ್ತ ಕ್ರಮ ಕೈಗೊಳ್ಳವಂತೆ ಟ್ವೀಟ್ನಲ್ಲಿ (ಎಕ್ಸ್ನಲ್ಲಿ) ವಿಡಿಯೋ ಹರಿಬಿಟ್ಟು ಪೊಲೀಸರನ್ನು ಟ್ಯಾಗ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!
Post Views: 62