ಬೆಂಗಳೂರು : ಚಿನ್ನದಂಗಡಿ ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ. ಎರಡು ಬೈಕ್ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಜ್ಯುವೆಲ್ಲರಿ ಶಾಪ್ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ.
ಈ ವೇಳೆ ಚಿನ್ನಾಭರಣ ಮಳಿಗೆಯ ಮಾಲೀಕ ಹಣ ನೀಡುವುದಕ್ಕೆ ವಿರೋಧಿಸಿದ್ದು, ದುಷ್ಕರ್ಮಿಗಳು ಹಾಗೂ ಮಾಲೀನ ನಡುವೆ ಮಾತಿನ ಚಕಮಕಿಯಾಗಿದೆ. ಆಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಮಾಲೀಕ ಅಪ್ಪುರಾಮ್ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಷ್ಟೇ ಅಲ್ಲದೆ ಅಂತರಾಮ್ ಎಂಬವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಂಗಡಿ ಮಾಲೀಕನ ಸ್ಥಿತಿ ಗಂಭೀರವಾಗಿದೆ. ದುಷ್ಕರ್ಮಿಗಳು ದರೋಡೆ ಅಲ್ಲದೆ ಸುಪಾರಿ ಪಡೆದು ಜ್ಯುವೆಲ್ಲರಿ ಅಂಗಡಿ ಮಾಲೀಕನನ್ನು ಕೊಲೆ ಮಾಡಲು ಬಂದಿದ್ದರು ಎಂಬ ಶಂಕೆಯೂ ವ್ಯಕ್ತವಾಗಿದೆ.
ಆರೋಪಿಗಳು ಬಂದು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪಿಸ್ತೂಲ್ ಅನ್ನು ಅಂಗಡಿಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಕಮಿಷನರ್ ದಯಾನಂದ್ ಹಾಗೂ ಕೋಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ತುಮಕೂರಿಗೆ ಬಿಜೆಪಿಯಿಂದ ಸೋಮಣ್ಣಗೆ ಟಿಕೆಟ್ : ಜೆ.ಸಿ ಮಾಧುಸ್ವಾಮಿ ಬೆಂಬಲಿಗರಿಂದ ಆಕ್ರೋಶ..!