Download Our App

Follow us

Home » ಅಪರಾಧ » ಬೆಂಗಳೂರು : ಹೆತ್ತ ಮಗಳನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊ*ಲೆ ಮಾಡಿದ ತಾಯಿ – ಅಸಲಿಗೆ ಆಗಿದ್ದೇನು?

ಬೆಂಗಳೂರು : ಹೆತ್ತ ಮಗಳನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊ*ಲೆ ಮಾಡಿದ ತಾಯಿ – ಅಸಲಿಗೆ ಆಗಿದ್ದೇನು?

ಬೆಂಗಳೂರು : ತಾಯಿ ಮಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ತಾಯಿ ಹಾಗೂ ಮಗಳು ಪರಸ್ಪರ ಚಾಕುವಿನಿಂದ ಇರಿದುಕೊಂಡ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಹಿತಿ (18) ತಾಯಿಯಿಂದಲೇ ಕೊಲೆಯಾದ ಮಗಳು.

ಪಿಯು ಫಲಿತಾಂಶದ ವಿಚಾರವಾಗಿ ತಾಯಿ ಮತ್ತು ಮಗಳ ನಡುವೆ ಆಗಾಗ ಜಗಳ ನಡೀತಿತ್ತು. ಮಗಳ ರಿಸಲ್ಟ್ ತೃಪ್ತಿಯಾಗಿಲ್ಲ ಎಂದು ನಿನ್ನೆ ರಾತ್ರಿಯೂ ತಾಯಿ ಮಗಳ ನಡುವೆ ಜಗಳ ನಡೆದಿದೆ. ಹೀಗೆ ನಿನ್ನೆ 7.30ರ ಸುಮಾರಿಗೆ ತಾಯಿ ಮಗಳ ಮಧ್ಯೆ ಜಗಳ ಶುರುವಾಗಿದ್ದು, ಈ ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ತಾಯಿ ಹಾಗೂ ಮಗಳ ಚಾಕುವಿನಿಂದ ಇರಿದು ಕೊಂಡಿದ್ದಾರೆ. ಪರಿಣಾಮ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿಗೆ ನಾಲ್ಕೈದು ಕಡೆ ಗಾಯವಾಗಿದೆ.

ಸದ್ಯ ತಾಯಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಾಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಬಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಬನಶಂಕರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಫೋಕ್ಸೋ ಪ್ರಕರಣ : ಮೇ.27 ರವರೆಗೆ ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ..!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here