ಬೆಂಗಳೂರು : ತನ್ನ ಮೇಲೆ ವಾಟರ್ ಟ್ಯಾಂಕ್ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು.
ಪ್ರರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆ್ಯಡಂ ಪಾಷ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆ್ಯಡಂ ಪಾಷ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ವಾಟರ್ ಟ್ಯಾಂಕ್ ಲಾರಿ ಅತಿವೇಗವಾಗಿ ಬರುತ್ತಿದ್ದದ್ದನ್ನು ಪ್ರಶ್ನಿಸಿದಕ್ಕೆ ಚಾಲಕ ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾಗಿ ಆ್ಯಡಂ ಪಾಷ ದೂರು ನೀಡಿದ್ದರು.
ಎಫ್ಐಆರ್ ದಾಖಲಿಸುವ ವೇಳೆ ಆ್ಯಡಂ ಪಾಷ ರಾಂಗ್ ನಂಬರ್ ಕೊಟ್ಟಿದ್ದಾರೆ. ತನಿಖೆ ವೇಳೆ ಆ್ಯಡಂ ಪಾಷ ಸುಳ್ಳು ದೂರು ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆ್ಯಡಂ ಪಾಷ ಕಳ್ಳಾಟ ಬಯಲಾಗಿದೆ. ತನ್ನ ಬಟ್ಟೆಗಳನ್ನ ತಾನೇ ಹರಿದುಕೊಂಡು ಬಂದು ದೂರು ಕೊಟ್ಟಿರುವುದು ತಿಳಿದುಬಂದಿದೆ.
ಇದೀಗ ಸಿಸಿಟಿವಿಯ ಒರಜಿನಾಲಿಟಿ ರಿಪೋರ್ಟ್ಗೆ ಪೊಲೀಸರು ಕಳಿಸಿದ್ದು, ಸುಳ್ಳು ದೂರು ಕೊಟ್ಟ ಹಿನ್ನಲೆ ಆ್ಯಡಂ ಪಾಷ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ಬಿಗ್ಬಾಸ್ ಸ್ಪರ್ಧಿ ಆ್ಯಡಂ ಪಾಷಗೆ ಈಗ ಬಂಧನದ ಭೀತಿ ಶುರುವಾಗಿದೆ.
ಇದನ್ನೂ ಓದಿ : ಬೆಂಗಳೂರು : ಮಹಿಳಾ ಪೊಲೀಸ್ ಮೊಬೈಲ್ ಕಳ್ಳನ ಹಿಡಿದ ಪ್ರಕರಣಕ್ಕೆ ತಿರುವು, ಘಟನೆಯ ಹಿಂದಿದೆ ಲವ್ ಕಹಾನಿ..!