ಬೆಂಗಳೂರು : ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಂಡನೇ ಮಡದಿಯನ್ನು ಬರ್ಬರವಾಗಿ ಹತ್ಯೆ ಮಾಡಿರು ಘಟನೆ ನಡೆದಿದೆ. ಶಾಂತಕುಮಾರ್ ಎಂಬಾತ ಪತ್ನಿ ದಿವ್ಯಾಳನ್ನು ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ರಾತ್ರಿ 9.45ರ ಸುಮಾರಿಗೆ ಕೊಲೆ ನಡೆದಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಪತಿ ಶಾಂತಕುಮಾರ್ ಪರಾರಿಯಾಗಿದ್ದಾನೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಆರೋಪಿ ಶಾಂತಕುಮಾರ್ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ..!
Post Views: 588