Download Our App

Follow us

Home » ಅಪರಾಧ » ಬೆಂಗಳೂರು : ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮನಸೋ ಇಚ್ಛೆ ಥಳಿಸಿದ ಯುವಕರು..!

ಬೆಂಗಳೂರು : ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮನಸೋ ಇಚ್ಛೆ ಥಳಿಸಿದ ಯುವಕರು..!

ಬೆಂಗಳೂರು : ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ 10ಕ್ಕೂ ಹೆಚ್ಚು ಯುವಕರ ಗುಂಪು ಮನಸೋ ಇಚ್ಛೆ ಥಳಿಸಿದ ಘಟನೆ ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿ ಬಳಿ ನಿನ್ನೆ ರಾತ್ರಿ ನಡೆದಿದೆ.

ಮಹಿಳೆ ಕೆಲಸದಿಂದ ಬಸ್​ ಇಳಿದು ಬರ್ತಿದ್ದ ವೇಳೆ ನಿರ್ಜನ ಪ್ರದೇಶದಲ್ಲಿ ಬೆಳಕು ಇಲ್ಲದ ಜಾಗದಲ್ಲಿ ನಿಂತಿದ್ದ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಆತಂಕಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಈ ವೇಳೆ ಮಹಿಳೆಯ ನೆರವಿಗೆ ಬಂದ ಗ್ರಾಮದ ಯುವಕರ ಗುಂಪು ಕುಡಿದ ನಶೆಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನ ಹಿಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದಿದ್ದಾರೆ.

ಹಲ್ಲೆ ಮಾಡಿ ಆಟೋದಲ್ಲಿ ಕರೆದೊಯ್ಯುವಾಗ ಪೊಲೀಸರು ಬಂದಿದ್ದು, ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಗಾಯಾಳು ವ್ಯಕ್ತಿಯನ್ನು ಸದ್ಯ ಜಿಗಣಿಯ ವಿಜಯಶ್ರೀ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಧಾರವಾಡ ಮೂಲದ ರವಿಕುಮಾರ್ ಹಲ್ಲೆಗೊಳಗಾದ ವ್ಯಕ್ತಿ ಎಂದು ಹೇಳಲಾಗಿದೆ.

ಇದನ್ನೂ ಓದಿ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here