ಬೆಂಗಳೂರು : ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ. ಐದು ವರ್ಷದ ಸುಹಾಸ್ ಗೌಡ ಮೃತ ಬಾಲಕ.
ನಿನ್ನೆ ಬೆಳಿಗ್ಗೆ ನಡೆದ ದುರಂತ ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಕಟ್ಟಡದಲ್ಲಿ ಲಿಫ್ಟ್ಗೆಂದು 5 ಅಡಿ ಗುಂಡಿ ತೋಡಲಾಗಿತ್ತು. ಭಾರೀ ಮಳೆಯ ಪರಿಣಾಮ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರೂ ಸಿಬ್ಬಂದಿ ಯಾವುದೇ ಮುನ್ನೆಚ್ಚರಿಕೆ ವಹಿಸದೇ ದುರಂತ ಸಂಭವಿಸಿದೆ.
ಬಾಲಕ ಮನೆ ಮುಂಭಾಗ ಆಟವಾಡುವ ವೇಳೆ ಆಯತಪ್ಪಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಮಿಲ್ಕ್ ಡೈರಿ ಅಧ್ಯಕ್ಷನ ಮೇಲೆ FIR ದಾಖಲಾಗಿದೆ. ಪ್ರಕರಣ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಇದನ್ನೂ ಓದಿ : ಅಮರನ್ ಚಿತ್ರದ ಟ್ರೈಲರ್ ರಿಲೀಸ್ – ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವ ಕಾರ್ತಿಕೇಯನ್..!
Post Views: 52