ನವದೆಹಲಿ : ಭಾರತದ ಮಾಜಿ ಉಪಪ್ರಧಾನಿ, ರಾಮ ಮಂದಿರ ಹೋರಾಟದ ರೂವಾರಿ, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ನಾಯಕ ಎಲ್ಕೆ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ಘೋಷಿಸಿದ್ದು, ‘ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹೇಳಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ’ ಎಂದು ಹೇಳಿದ್ದಾರೆ.
ಲಾಲ್ ಕೃಷ್ಣ ಅಡ್ವಾಣಿಯವರು ಎಲ್.ಕೆ ಅಡ್ವಾಣಿ ಎಂದೇ ಪರಿಚಿತರು. ಬಿಜೆಪಿ ಪಕ್ಷದ ಸಹ ಸಂಸ್ಥಾಪಕರಲ್ಲಿ ಇವರು ಕೂಡ ಒಬ್ಬರಾಗಿದ್ದಾರೆ. ಹಿಂದೂ ರಾಷ್ಟ್ರೀಯತಾವಾದಿ ಸ್ವಯಂಸೇವಕ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸದಸ್ಯರೂ ಆಗಿದ್ದಾರೆ. 90 ದಶಕದಲ್ಲಿ ರಾಮಮಂದಿರಕ್ಕಾಗಿ ಹೋರಾಟ ಮಾಡಿದ ಧೀಮಂತ ನಾಯಕ. ಇವರು 2002 ರಿಂದ 2004ರ ವರೆಗೆ ಭಾರತದ ಉಪ ಪ್ರಧಾನಮಂತ್ರಿ ಆಗಿದ್ದರು.
ಇದನ್ನೂ ಓದಿ : ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ – ಟೀಂ ಇಂಡಿಯಾ ಪರ ಜೈಸ್ವಾಲ್ ವಿಶೇಷ ಸಾಧನೆ..!