ಬೆಂಗಳೂರು : ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಸಿಲುಕಿ ಮೂರು ವಾರಗಳಿಂದ ತಲೆ ಮರೆಸಿಕೊಂಡಿದ್ದ ಭವಾನಿ ರೇವಣ್ಣ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ SIT ಮುಂದೆ ಹಾಜರಾಗಿದ್ದಾರೆ.
ಹೈಕೋರ್ಟ್ ಏಕಸದಸ್ಯ ಪೀಠದಿಂದ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿತ್ತು. ಹೀಗಾಗಿ ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ SIT ಮುಂದೆ ಹಾಜರಾಗಲು ಭವಾನಿ ರೇವಣ್ಣಗೆ ಸೂಚನೆ ನೀಡಿತ್ತು. ಜೊತೆಗೆ ತನಿಖೆಗೆ ಸಹಕರಿಸುವಂತೆ ಕೋರ್ಟ್ ಸೂಚಿಸಿದೆ. ಇದೀಗ ವಕೀಲರ ಜೊತೆ ಭವಾನಿ ರೇವಣ್ಣ ಎಸ್ಐಟಿ ವಿಚಾರಣೆಗೆ ಹಾಜರ್ ಆಗಿದ್ದಾರೆ.
ಎಲ್ಲೇ ಇದ್ರೂ ಮಧ್ಯಾಹ್ನದೊಳಗೆ ವಿಚಾರಣೆಗೆ ಹಾಜರಾಗಿ, SIT ಮುಂದೆ ಹಾಜರಾಗಿ ವಿಚಾರಣೆ ಎದುರಿಸಿ ಎಂದು ಭವಾನಿ ರೇವಣ್ಣಗೆ ಹೈಕೋರ್ಟ್ ಸೂಚನೆ ನೀಡಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು.
ಇದನ್ನೂ ಓದಿ : ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಷರತ್ತು ಬದ್ದ ಜಾಮೀನು ಮಂಜೂರು..!
Post Views: 138