Download Our App

Follow us

Home » ಜಿಲ್ಲೆ » ಬೀದರ್ : ಸಾಲಬಾಧೆ ತಾಳಲಾರದೆ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ವೈದ್ಯ ಆತ್ಮಹತ್ಯೆ..!

ಬೀದರ್ : ಸಾಲಬಾಧೆ ತಾಳಲಾರದೆ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ವೈದ್ಯ ಆತ್ಮಹತ್ಯೆ..!

ಬೀದರ್ : ಸಾಲ ಬಾಧೆಗೆ ಸಿಲುಕಿ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಹೊರವಲಯದ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮಹ್ಮದ್ ಸೊಹೆಲ್ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಡಾಕ್ಟರ್.

ಬೀದರ್ ಹೊರವಲಯದ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಮರಕ್ಕೆ ಮಹ್ಮದ್ ಸೊಹೆಲ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಪಿಜಿ ವಿದ್ಯಾರ್ಥಿಯಾಗಿದ್ದ ಸೊಹೆಲ್, ಬಜಾಜ್ ಫೈನಾನ್ಸ್ ಹಾಗೂ ಇನ್ನಿತರ ಖಾಸಗಿ ಆನ್​ಲೈನ್​ನಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಆನ್​ಲೈನ್ ಹೂಡಿಕೆಯಲ್ಲಿ ಭಾರೀ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.

ಕಳೆದ ಸಪ್ಟೆಂಬರ್ 4ರಂದು ಮನೆಯಿಂದ ಬೈಕ್​ನಲ್ಲಿ ಹೊರ ಹೊರಗಿದ್ದ ಸೊಹೆಲ್, ಬಳಿಕ ನಾಪತ್ತೆಯಾಗಿದ್ದರು. ನಿನ್ನೆ (ಸ.10) ಸೊಹೆಲ್​ ಶವ ಕೊಳೆತ ಸ್ಥಿತಿಯಲ್ಲಿ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಘಟನೆ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮೈಸೂರು : ಮಗಳ ಮದುವೆಗೆ ಇಟ್ಟಿದ್ದ 20 ಲಕ್ಷ ನಗದು, 500 ಗ್ರಾಂ ಚಿನ್ನ ಕಳವು..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here