ಪಲ್ಲೆಕೆಲೆ : ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಸೂರ್ಯ ಪಡೆ ಲಂಕಾ ವಿರುದ್ಧ 7 ವಿಕೆಟ್ಗಳಿಂದ ಗೆದ್ದು ಬೀಗಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅತಿಥೇಯ ಶ್ರೀಲಂಕಾ ತಂಡ 161 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಭಾರತ, ಇನ್ನಿಂಗ್ಸ್ ಆರಂಭಿಸುತ್ತಿದ್ದಂತೆ ಮಳೆ ಅಡ್ಡಿಯಾದ ಕಾರಣ ಡಿಎಲ್ಎಸ್ ಮೆಥೆಡ್ ಪ್ರಕಾರ ಪಂದ್ಯದಲ್ಲಿ ಓವರ್ ಕಡಿತ ಮಾಡಲಾಯಿತು. ಈ ಮೂಲಕ ಟೀಂ ಇಂಡಿಯಾಗೆ 8 ಓವರ್ಗಳಲ್ಲಿ 78ರನ್ಗಳ ಗುರಿ ನೀಡಲಾಗಿತ್ತು.
ಈ ಮೊತ್ತವನ್ನ ಸೂರ್ಯಕುಮರ್ ಯಾದವ್ ಸಾರಥ್ಯದ ಭಾರತ ತಂಡ 6.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ T20 ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಿಂದ ಕೈವಶ ಮಾಡಿಕೊಂಡಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲೂ ದಿಟ್ಟ ಪ್ರದರ್ಶನ ಕಂಡುಬಂದಿದೆ. ಇದರೊಂದಿಗೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಹೊಸ ಯುಗ ಗೆಲುವಿನೊಂದಿಗೆ ಆರಂಭವಾಗಿದೆ.
ಇದನ್ನೂ ಓದಿ : ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ – 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಕಂಚು ಗೆದ್ದು ದಾಖಲೆ ಬರೆದ ಮನು ಭಾಕರ್..! –