Download Our App

Follow us

Home » ಸಿನಿಮಾ » ಬಿಗ್​ಬಾಸ್​ ಸ್ಪರ್ಧಿಗಳಿಗೆ ಬಿಗ್​ ಶಾಕ್ – ದೊಡ್ಮನೆಗೆ ರಾಧಾ ಹಿರೇಗೌಡರ್ ಖಡಕ್ ಎಂಟ್ರಿ..!

ಬಿಗ್​ಬಾಸ್​ ಸ್ಪರ್ಧಿಗಳಿಗೆ ಬಿಗ್​ ಶಾಕ್ – ದೊಡ್ಮನೆಗೆ ರಾಧಾ ಹಿರೇಗೌಡರ್ ಖಡಕ್ ಎಂಟ್ರಿ..!

ಬಿಗ್​ಬಾಸ್ ಕನ್ನಡ​ ಸೀಸನ್​ 11 ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಮನೆಯಲ್ಲಿ ಸ್ಪರ್ಧಿಗಳ ನಡುವೆ ಪೈಪೋಟಿ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಲಾಯರ್ ಜಗದೀಶ್ ಮತ್ತು ರಂಜಿತ್​​ ಅವರನ್ನು ಎಲಿಮಿನೇಟ್ ಮಾಡಿದ ಬಳಿಕ ಗಾಯಕ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡದ ನಿರೂಪಕಿ ರಾಧಾ ಹಿರೇಗೌಡರ್ ಅವರು ಎಂಟ್ರಿ ಕೊಟ್ಟಿದ್ದಾರೆ.

ಬಿಗ್​ಬಾಸ್​ ಮನೆಗೆ ರಾಧಾ ಹಿರೇಗೌಡರ್ ಅವರು ಬರುತ್ತಿದ್ದಂತೆ. ಕನ್ನಡ ಹೆಣ್ಣು ನಾನು ಸಿಡಿದೆದ್ದರೆ ಮಿಷನ್ ಗನ್ನು ಹಾಡನ್ನು ಹಾಕಲಾಗಿದೆ. ಮನೆಗೆ ಬರುತ್ತಿದ್ದಂತೆ ಉಳಿದ ಸ್ಪರ್ಧಿಗಳು ಶಾಕ್​ ಆಗಿದ್ದಾರೆ. ಇನ್ನೂ, ಕೆಲವರಲ್ಲಿ ಭಯ ಹುಟ್ಟಿಕೊಂಡಿದೆ. ಮನೆಗೆ ಎಂಟ್ರಿ ಕೊಟ್ಟ ರಾಧಾ ಹಿರೇಗೌಡರ್ ಸ್ಪರ್ಧಿಗಳಿಗೆ ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದಾರೆ.

ಐಶ್ವರ್ಯ ನಿಮ್ಮ ಪಕ್ಷದಲ್ಲಿ ಯಾರು ಪ್ರಾಮಾಣಿಕವಾಗಿದ್ದಾರೆ. ನಿಮ್ಮ ಎದೆಯನ್ನ ಮುಟ್ಟಿಕೊಂಡು ಹೇಳಿ, ನಿಮ್ಮ ಪಕ್ಷದಲ್ಲಿ ಇರೋರು ಪ್ರಾಮಾಣಿಕವಾಗಿಯೇ ಇದ್ದಾರಾ? ಇದ್ರೇ ಹೇಗೆ ಅನ್ನುವ ಅರ್ಥದ ಪ್ರಶ್ನೆಯನ್ನ ಕೂಡ ರಾಧಾ ಹಿರೇಗೌಡರ್‌ ಕೇಳಿದ್ದಾರೆ. ರಾಧಾ ಹಿರೇಗೌಡರ್ ಅವರ ಪ್ರಶ್ನೆಗೆ ಉತ್ತರ ಕೊಡದೇ ಕೆಲ ಸ್ಪರ್ಧಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಆದರೆ ರಾಧಾ ಹಿರೇಗೌಡರ್ ಅವರು ಸ್ಪರ್ಧಿಯಾಗಿ ಬಂದಿದ್ದಾರಾ ಅಥವಾ ಅತಿಥಿಯಾಗಿ ಬಂದಿದ್ದಾರಾ ಎಂದು ಇಂದಿನ ಸಂಚಿಕೆಯಲ್ಲಿ ತಿಳಿದು ಬರಲಿದೆ.

ಇದನ್ನೂ ಓದಿ : ಬೆಂಗಳೂರು ಕಟ್ಟಡ ದುರಂತ ಪ್ರಕರಣ – ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು ಕಟ್ಟಡ ದುರಂತ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದು..!

ಬೆಂಗಳೂರು : ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದ 8ಜನ ಮೃತಪಟ್ಟಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ದುರಂತ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ತಲಾ

Live Cricket

Add Your Heading Text Here