ಬಿಗ್ಬಾಸ್ ಕನ್ನಡ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್ಬಾಸ್ ನಾಮಿನೇಷನ್ ಪ್ರಕ್ರಿಯೆ ವಿಭಿನ್ನವಾಗಿ ನಡೆದಿದೆ.
ಬಿಗ್ಬಾಸ್ ಮನೆಯಲ್ಲಿ ನಾಮಿನೇಷನ್ ಬೆಂಕಿ ಹೊತ್ತಿಕೊಂಡಿದ್ದು, ಈ ಬಾರಿ ನಡೆದ ವಿಭಿನ್ನ ನಾಮಿನೇಷನ್ ಟಾಸ್ಕ್ನಲ್ಲಿ ಸ್ಪರ್ಧಿಗಳು ಮನೆಯಿಂದ ಆಚೆ ಕಳುಹಿಸಲು ಇಷ್ಟ ಪಡುವ ಸ್ಪರ್ಧಿಗಳ ತಲೆ ಮೇಲೆ ಬಾಟಲಿಯಿಂದ ಹೊಡೆದು ನಾಮಿನೇಟ್ ಮಾಡಬೇಕು. ಅಂತೆಯೇ ಭವ್ಯ ಗೌಡ ಅವರು, ಐಶ್ವರ್ಯಾ ಅವರ ತಲೆಗೆ ಬಾಟಲಿ ಹೊಡೆದಿದ್ದರು. ಮೋಕ್ಷಿತಾ ಉಗ್ರಂ ಮಂಜು ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ.
ರಜತ್, ಚೈತ್ರಾ ತಲೆಗೆ ಬಾಟಲಿ ಹೊಡೆದಿದ್ದಾರೆ. ನಾಮಿನೇಟ್ ಮಾಡುವಾಗ ರಜತ್ ಚೈತ್ರಾಗೆ, ನಮ್ಮ ಪ್ರೀತಿಯ ಚೈತ್ರಾ ಅವರು ಬೇರೆ ಬೇರೆ ಟಾಸ್ಕ್ನಲ್ಲಿ ಕಾಣಲಿಲ್ಲ, ಸೀರೆ ಒಗಿಯುವುದರಲ್ಲೂ ನಿಮ್ಮ ಟ್ಯಾಲೆಂಟ್ ಕಾಣಲಿಲ್ಲ. ಇನ್ನೂ ಯಾಕಾದ್ರೂ ಬಿಗ್ಬಾಸ್ ಮನೆಯಲ್ಲಿ ಇದ್ದೀಯಮ್ಮಾ? ಧಮ್ಮಯ್ಯಾ.. ಹೊರಡಮ್ಮ ಮನೆಗೆ ಅಂತ ಹೇಳಿದ್ದಾರೆ. ಮತ್ತೊಂದು ಕಡೆ ಮಂಜು ತ್ರಿವಿಕ್ರಮ್ನನ್ನೂ ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಜೋರು ಮಾತುಕತೆ ನಡೆದಿದೆ.
ಇದನ್ನೂ ಓದಿ : ಸಿಹಿಕಹಿ ಚಂದ್ರು ದಂಪತಿಯಿಂದ “ಪಾಠಶಾಲಾ” ಟೀಸರ್ ರಿಲೀಸ್..!