Download Our App

Follow us

Home » ಅಪರಾಧ » ಕಿಡ್ನ್ಯಾಪ್ ಕೇಸ್​ನಲ್ಲಿ ಸಿಲುಕಿ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣಗೆ ಬಿಗ್​ ರಿಲೀಫ್..!

ಕಿಡ್ನ್ಯಾಪ್ ಕೇಸ್​ನಲ್ಲಿ ಸಿಲುಕಿ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣಗೆ ಬಿಗ್​ ರಿಲೀಫ್..!

ಬೆಂಗಳೂರು : ಕೆ.ಆರ್ ನಗರ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್​ನಲ್ಲಿ ಸಿಲುಕಿ ಭವಾನಿ ರೇವಣ್ಣ ಮೂರು ವಾರಗಳಿಂದ ತಲೆ ಮರೆಸಿಕೊಂಡಿದ್ದರು. ಆದರೀಗ ಈ ಪ್ರಕರಣದ ಸಂಬಂಧ ಅವರಿಗೆ ಬಿಗ್​ ರಿಲೀಫ್ ಸಿಕ್ಕಿದೆ. ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಹೈಕೋರ್ಟ್​ ಏಕಸದಸ್ಯ ಪೀಠದಿಂದ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಹೀಗಾಗಿ ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ SIT ಮುಂದೆ ಹಾಜರಾಗಲು ಭವಾನಿ ರೇವಣ್ಣಗೆ ಸೂಚನೆ ನೀಡಲಾಗಿದೆ. ಜೊತೆಗೆ ತನಿಖೆಗೆ ಸಹಕರಿಸುವಂತೆ ಕೋರ್ಟ್​ ಸೂಚಿಸಿದೆ.

ಎಲ್ಲೇ ಇದ್ರೂ ಮಧ್ಯಾಹ್ನದೊಳಗೆ ವಿಚಾರಣೆಗೆ ಹಾಜರಾಗಿ, SIT ಮುಂದೆ ಹಾಜರಾಗಿ ವಿಚಾರಣೆ ಎದುರಿಸಿ ಎಂದು ಭವಾನಿ ರೇವಣ್ಣಗೆ ಹೈಕೋರ್ಟ್ ಸೂಚನೆ ನೀಡಿದ್ದು, ಇದೀಗ ಭವಾನಿ ರೇವಣ್ಣಗೆ ಜಾಮೀನು ಸಿಕ್ಕಿದ್ದರಿಂದ ಅರೆಸ್ಟ್ ಆತಂಕ ದೂರ ಆದಂತಾಗಿದೆ. ಹೈಕೋರ್ಟ್ ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಿದ್ದು, ಷರತ್ತು ಬದ್ಧ ಜಾಮೀನು ನೀಡಿ ನ್ಯಾಯಮೂರ್ತಿ ಕೃಷ್ಣ ಎಸ್​.ದೀಕ್ಷಿತ್ ನೇತೃತ್ವದ​ ಪೀಠ ಆದೇಶ ಹೊರಡಿಸಿದೆ.

ಇದನ್ನೂ  ಓದಿ : ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಷರತ್ತು ಬದ್ದ ಜಾಮೀನು ಮಂಜೂರು..!

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here