Download Our App

Follow us

Home » ಜಿಲ್ಲೆ » ಸ್ಕಿಡ್‌ ಆಗಿ ಸೇತುವೆಯಿಂದ ಘಟಪ್ರಭಾ ನದಿಗೆ ಬಿದ್ದ ಬೈಕ್‌.. ದಂಪತಿ ಸಾವು..!

ಸ್ಕಿಡ್‌ ಆಗಿ ಸೇತುವೆಯಿಂದ ಘಟಪ್ರಭಾ ನದಿಗೆ ಬಿದ್ದ ಬೈಕ್‌.. ದಂಪತಿ ಸಾವು..!

ಚಿಕ್ಕೋಡಿ : ಬೈಕ್​ ಸ್ಕಿಡ್‌ ಆಗಿ ಸೇತುವೆ ಮೇಲಿಂದ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗಣಿಹಾಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಸುರೇಶ ಬಡಿಗೇರ (53) ಜಯಶ್ರೀ ಬಡಿಗೇರ (45) ಮೃತರೆಂದು ಗುರುತಿಸಲಾಗಿದೆ.

ನೊಗಣಿಹಾಳ ಗ್ರಾಮದ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಲ್ಲಿ ಘಟನೆ ನಡೆದಿದೆ. ಕಳೆದ ರಾತ್ರಿಯೇ ಜಯಶ್ರೀ ಅವರ ಶವ ಹಾಗು ಬೈಕ್‌ ಅನ್ನು ಹುಕ್ಕೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸುರೇಶ ಬಡಿಗೇರ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ.

ಸೇತುವೆಗೆ ತಡೆಗೋಡೆ ಇರದೇ ಇರುವುದು ದುರ್ಘಟನೆಗೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಎಸ್​ಪಿ ಶೃತಿ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ – ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ED ವಿಚಾರಣೆ..!

Leave a Comment

DG Ad

RELATED LATEST NEWS

Top Headlines

ಅಭ್ಯರ್ಥಿ ಡಿಸೈಡ್ ಮಾಡೋದು ಬಿಜೆಪಿ ವರಿಷ್ಠರು ಮತ್ತು ನಾನು – ಯೋಗೇಶ್ವರ್​ಗೆ HDK ಟಾಂಗ್​​​..!

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಚನ್ನಪಟ್ಟಣ

Live Cricket

Add Your Heading Text Here