Download Our App

Follow us

Home » ಜಿಲ್ಲೆ » ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಿಸದೇ ಇದ್ದರೆ ಬಂಡಾಯ ಸ್ಪರ್ಧೆ..!

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಿಸದೇ ಇದ್ದರೆ ಬಂಡಾಯ ಸ್ಪರ್ಧೆ..!

ದಾವಣಗೆರೆ : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಎಲ್ಲಾ ಕ್ಷೇತ್ರದಲ್ಲೂ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ದಾವಣಗೆರೆ ಬಿಜೆಪಿಯಲ್ಲಿ ಬಂಡಾಯ ಬಿರುಗಾಳಿ ಎದ್ದಿದೆ. ಅಭ್ಯರ್ಥಿ ಬದಲಿಸದೇ ಇದ್ದರೆ ಬಂಡಾಯ ಸ್ಪರ್ಧೆ ಮಾಡುವುದಾಗಿ ಸ್ಥಳೀಯ ನಾಯಕರು ಘೋಷಿಸಿದ್ದಾರೆ.

ಬಿಜೆಪಿ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ  ಗಾಯತ್ರಿ ಸಿದ್ದೇಶ್ವರ್ ಅವರನ್ನು ಕಣಕ್ಕಿಳಿಸಿದೆ.ಇದರಿಂದ ಸಿಡಿದೆದ್ದಿರೊ ಅಸಮಾಧಾನಿತರ ಗುಂಪು  ಗಾಯತ್ರಿ ಸಿದ್ದೇಶ್ವರ್ ಬದಲಾವಣೆಗೆ ಪಟ್ಟು ಹಿಡಿದಿದೆ. ಅಭ್ಯರ್ಥಿ ಬದಲಾವಣೆ ಮಾಡದಿದ್ದರೆ. ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ಸಹ ನಿರ್ಧರಿಸಿದೆ.

ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಫ್ಯಾಮಿಲಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡರು ಲೋಕಿಕೆರೆ ನಾಗರಾಜ್ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಇನ್ನೊಂದು ಸುತ್ತಿನ ಸಭೆ ರೇಣುಕಾಚಾರ್ಯ, ಕರುಣಾಕರ ರೆಡ್ಡಿ, ಎಸ್​.ವಿ.ರವೀಂದ್ರನಾಥ್​ ನೇತೃತ್ವದಲ್ಲಿ ನಡೆಯಲ್ಲಿದ್ದು, ಜಿಲ್ಲಾ ಬಿಜೆಪಿಯ ಬಹುತೇಕ ಮಾಜಿ ಸಚಿವರು, ಮಾಜಿ ಶಾಸಕರು, ಸೋತ ಅಭ್ಯರ್ಥಿಗಳು ಸೇರಿ 15 ಮುಖಂಡರು ಭಾಗಿಯಾಗಲಿದ್ದಾರೆ.

ಅಭ್ಯರ್ಥಿ ಬದಲಿಸದೇ ಇದ್ದರೆ ಮುಂದಿನ ವಾರ ಮಠಾಧೀಶರ ಭೇಟಿ ಮಾಡುತ್ತೇವೆ. ನಂತರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಚ್ಚರಿ ಅಭ್ಯರ್ಥಿ ಘೋಷಿಸುತ್ತೇವೆ ಎಂದು ರೇಣುಕಾಚಾರ್ಯ, ಕರುಣಾಕರ ರೆಡ್ಡಿ, ರವೀಂದ್ರನಾಥ್​​ ವಾರ್ನಿಂಗ್​​​​ ಮಾಡಿದ್ದಾರೆ.

ಇದನ್ನೂ ಓದಿ : ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಮರದ ಕೊಂಬೆ ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ : ಖಾಸಗಿ ಶಾಲೆ, BBMP ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here