Download Our App

Follow us

Home » ರಾಜಕೀಯ » ಚಿಕ್ಕಬಳ್ಳಾಪುರ ಕ್ಷೇತ್ರದಿಂದ BJP ಅಭ್ಯರ್ಥಿ ಡಾ.ಕೆ.ಸುಧಾಕರ್​​ ಸ್ಪರ್ಧೆ ಫಿಕ್ಸ್​..!

ಚಿಕ್ಕಬಳ್ಳಾಪುರ ಕ್ಷೇತ್ರದಿಂದ BJP ಅಭ್ಯರ್ಥಿ ಡಾ.ಕೆ.ಸುಧಾಕರ್​​ ಸ್ಪರ್ಧೆ ಫಿಕ್ಸ್​..!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರಕ್ಕೆ BJP ಅಭ್ಯರ್ಥಿ ಫಿಕ್ಸ್ ಆಗಿದೆ. ಡಾ.ಕೆ.ಸುಧಾಕರ್​​ BJPಯಿಂದ ಅಖಾಡಕ್ಕೆ ಧುಮುಕಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದು, ಡಾಕ್ಟರ್ ಸುಧಾಕರ್ ಸ್ಪರ್ಧೆಗೆ ರಾಜ್ಯ, ರಾಷ್ಟ್ರೀಯ ನಾಯಕರ ಅಸ್ತು ಎಂದಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ಟೀಂ ಮೂರು ಸರ್ವೆ ಮಾಡಿಸಿದೆ.  ಮೂರು ಸರ್ವೆಗಳಲ್ಲೂ ಜನರು ಸುಧಾಕರ್​ಗೆ ಜೈ ಎಂದಿದ್ದಾರೆ. ಎರಡು ಬಾರಿ ಚಿಕ್ಕಬಳ್ಳಾಪುರ ವಿಧಾನಸಭೆ ಎಲೆಕ್ಷನ್​​ನಲ್ಲಿ ಡಾಕ್ಟರ್ ಸುಧಾಕರ್ ಗೆದ್ದಿದ್ರು. ಸುಧಾಕರ್​​ ಅವರು BSY, ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಹಾಗೆಯೇ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.

ಬಿಜೆಪಿಗೆ ಬಂದಾಗ ಬೈ ಎಲೆಕ್ಷನ್​​ನಲ್ಲೂ ಭಾರೀ ಅಂತರದಿಂದ ಗೆದ್ದಿದ್ದರು, ಕಳೆದ ಅಸೆಂಬ್ಲಿ ಎಲೆಕ್ಷನ್​​ನಲ್ಲಿ ಸುಧಾಕರ್​​ ಅಚ್ಚರಿ ಸೋಲು ಕಂಡಿದ್ದರು. ಚಿಕ್ಕಬಳ್ಳಾಪುರ ಅಸೆಂಬ್ಲಿ ಕ್ಷೇತ್ರಕ್ಕೆ ಅಭಿವೃದ್ಧಿ ಸುರಿಮಳೆಯನ್ನೇ ಹರಿಸಿದ್ರು. ಡಾ.ಸುಧಾಕರ್ ಸ್ಪರ್ಧೆಗೆ ಕ್ಷೇತ್ರದ ಹಲವು ಮುಖಂಡರೂ ಸಲಹೆ ನೀಡಿದ್ದಾರೆ.

ಡಾಕ್ಟರ್ ಸುಧಾಕರ್ ಸ್ಪರ್ಧಿಸಿದರೆ ಚಿಕ್ಕಬಳ್ಳಾಪುರದಲ್ಲಿ ಗೆಲುವು ಸುಲಭವಾಗಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಸ್ಥಳೀಯ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಹೇಳಿದ್ದಾರೆ. ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಸೇರಿ 8 ಅಸೆಂಬ್ಲಿ ಕ್ಷೇತ್ರಗಳಿವೆ.

ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಜೆಡಿಎಸ್​ ಬಲವೂ ಸಿಕ್ಕರೆ ಗೆಲುವು ನಿಶ್ಚಿತವಾಗಿದೆ. ಡಾ.ಸುಧಾಕರ್ ಸ್ಪರ್ಧೆ ತಿಳಿಯುತ್ತಿದ್ದಂತೆ ಕೇಸರಿ ಕಾರ್ಯಕರ್ತರಲ್ಲೂ ಸಂಭ್ರಮ ಹೆಚ್ಚಾಗಿದೆ.

ಇದನ್ನೂ ಓದಿ : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ : ಕಾಡಿನಲ್ಲಿ ಸ್ಥಳ ಮಹಜರ್​ ಮಾಡಿದ FSL..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here